ನಾನು ಸಚಿವ ಸ್ಥಾನ ಕೇಳಿಲ್ಲ: ರಾಮಲಿಂಗಾರೆಡ್ಡಿ

ನಾನು ಸಚಿವ ಸ್ಥಾನ ಕೇಳಿಲ್ಲ: ರಾಮಲಿಂಗಾರೆಡ್ಡಿ

ಬೆಂಗಳೂರು, ಜು. 8: ರಾಜ್ಯದ ರಾಜ್ಯಕೀಯದಲ್ಲಿ ಕ್ಷಣ ಕ್ಷಣಕ್ಕೂ ಮೈತ್ರಿ ಸರ್ಕಾರದಲ್ಲಿ ಬದಲಾವಣೆಗಳು ನಡೆಯುತಿದ್ದು, ಇಂದು ಮುಂಬೈಗೆ ತೆರಳಿ ಅಲ್ಲಿ ತಂಗಿರುವ ಅತೃಪ್ತ ಶಾಸಕರೊಂದಿಗೆ ಸೇರಿಕೊಳ್ಳಲಿದ್ದಾರೆಂದು ಹೇಳಲಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ತಾವು ಮುಂಬೈಗೆ ಹೋಗಲ್ಲ, ಸಚಿವ ಸ್ಥಾನವನ್ನೂ ಕೇಳಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ನನ್ನೊಂದಿಗೆ ಮಾತನಾಡಿದ್ದಾರೆ. ಡಿ.ಕೆ. ಶಿವಕುಮಾರ್ ಕಳೆದ 40 ವರ್ಷಗಳಿಂದಲೂ ನನ್ನ ಸ್ನೇಹಿತರು. ಅವರು ಮಾತನಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಮೈತ್ರಿಕೂಟ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಿದರೆ ಸ್ವೀಕರಿಸುತ್ತೀರಾ ಎಂಬ ಪ್ರಶ್ನೆಗೆ, ನಾನು ನನ್ನ ರಾಜಕೀಯ ಜೀವನದಲ್ಲಿ ಎಂದೂ ಕೂಡ ಸಚಿವ ಸ್ಥಾನವನ್ನು ಕೇಳಿಲ್ಲ ಎಂದು ಹೇಳಿದ ರಾಮಲಿಂಗಾರೆಡ್ಡಿ, ನಿಮ್ಮ ಪುತ್ರಿ ಸೌಮ್ಯ ರೆಡ್ಡಿ ಇಂದು ರಾಜೀನಾಮೆ ನೀಡುತ್ತಾರಾ ಎಂದು ಕೇಳಿದಾಗ ಅವರನ್ನೇ ಕೇಳಿ ಎಂದು ಉತ್ತರಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos