22 ಮಕ್ಕಳಿಗೆ `ರಾಷ್ಟ್ರೀಯ ಶೌರ್ಯ’ ಪ್ರಶಸ್ತಿ

22 ಮಕ್ಕಳಿಗೆ `ರಾಷ್ಟ್ರೀಯ ಶೌರ್ಯ’ ಪ್ರಶಸ್ತಿ

ನವದೆಹಲಿ, ಜ. 22: ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 22 ಮಕ್ಕಳಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿಗಳನ್ನು ನೀಡಿದ್ದಾರೆ. ಪ್ರತಿ ವರ್ಷ ಕೇಂದ್ರ ಸರ್ಕಾರದಿಂದ ಸಾಹಸ ಮೆರೆದ ಮಕ್ಕಳಿಗೆ ನೀಡಲಾಗುವ ಶೌರ್ಯ ಪ್ರಶಸ್ತಿ 2019 ಪ್ರಕಟವಾಗಿದ್ದು, ಇಂದು ಕರ್ನಾಟಕದ ಇಬ್ಬರು ಸೇರಿ 22 ಮಕ್ಕಳಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅರತಿ ಶೇಟ್ (9) ಹಾಗೂ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸಂಕನೂರಿನ ವೆಂಕಟೇಶ್ (13) ಅವರಿಗೆ ಶೌರ್ಯ ಪ್ರಶಸ್ತಿ ನೀಡಲಾಗಿದೆ.

ಇನ್ನು ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು ಮತ್ತು ರಾಜ್ಯದ ಉನ್ನತಾಧಿಕಾರಿಗಳು ಹಾಗೂ ಮಕ್ಕಳ ಪೋಷಕರು ಭಾಗವಹಿಸಿದ್ದರು. ಈ ಪ್ರಶಸ್ತಿ ಪಡೆದಿರುವ ಮಕ್ಕಳು ದೆಹಲಿಯಲ್ಲಿ ಜನವರಿ 26 ರಂದು ನಡೆಯುವ ಪಥಸಂಚಲನದ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos