ರಾಷ್ಟ್ರೀಯ ಆರೋಗ್ಯ ಅಭಿಯಾನ

ರಾಷ್ಟ್ರೀಯ ಆರೋಗ್ಯ ಅಭಿಯಾನ

ಕೊಟ್ಟೂರು : ವಿಜಯನಗರ ಜಿಲ್ಲೆ ಕೊಟ್ಟೂರಿನಲ್ಲಿ ಶುಕ್ರವಾರ ಕೋವಿಡ್-19 ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಕುಮಾರ್ ಸ್ವಾಮಿ ಹೇಳಿದರು.

ನಂತರ ಮಾತನಾಡಿದ ಅವರು ಇದುವರೆಗೂ ಒಂದೂ ಡೋಸ್ ಲಸಿಕೆ ಪಡೆಯದ, 2ನೇ ಡೋಸ್ ಬಾಕಿ ಇರುವ ವಾರಿಯರ್ಸಗಳಿಗೆ ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿ ಶೇ.100 ರಷ್ಟು ಪ್ರಗತಿ ಸಾಧಿಸುವುದು. 60 ವರ್ಷ ಮೇಲ್ಪಟ್ಟವರಿಗೆ 1 ಮತ್ತು 2ನೇ ಡೋಸ್ ಪಡೆಯದವರ ಮಾಹಿತಿ ಪಡೆದು ಲಸಿಕೆ ಹಾಕಿಸುವುದು. ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 1 ರಿಂದ 10ನೇ ತರಗತಿ, ಪದವಿ ಪೂರ್ವ ಕಾಲೇಜಿನ ಭೋದಕ, ಭೋದಕೇತರ ಸಿಬ್ಬಂದಿಗಳು ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ಲಸಿಕೆ ಹಾಕಿಸುವುದು ಹಾಗೂ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆಯನ್ನು ಹಾಕಿಸಿ ಹೆಚ್ಚಿನ ಪ್ರಗತಿ ಸಾಧಿಸುವುದು ಈ ಲಸಿಕಾ ಮೇಳದ ಉದ್ದೇಶವಾಗಿದೆ ಎಂದು ಎಂ. ಕುಮಾರ ಸ್ವಾಮಿ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos