ಬೀದಿ ಬದಿ ವ್ಯಾಪಾರಿಗಳ ಜಯಂತೋತ್ಸವ

ಬೀದಿ ಬದಿ ವ್ಯಾಪಾರಿಗಳ ಜಯಂತೋತ್ಸವ

ಬೆಂಗಳೂರು, ಜ.16: ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ವತಿಯಿಂದ ಜ.20ರಂದು ಟೌನ್ ಹಾಲ್ ನಿಂದ ಫ್ರೀಡಂಪಾರ್ಕ್ ವರೆಗೆ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ಹಾಗೂ ಪಟ್ಟಣ ವ್ಯಾಪಾರ ಸಮಿತಿಗೆ ಆಯ್ಕೆಯಾದ ಅಭ್ಯರ್ಥಿಗಳ ವಿಜಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ರಾಜ್ಯಾಧ್ಯಕ್ಷ ರಂಗಸ್ವಾಮಿ ಸಿ.ಈ ಮಾತನಾಡಿ, ರಾಜ್ಯದಲ್ಲಿ ಸುಮಾರು 4.80 ಲಕ್ಷದಷ್ಟು ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಅದರಲ್ಲಿ ಸುಮಾರು 1.60 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಸರಕಾರದಿಂದ ಗುರುತಿನ ಚೀಟಿ ನೀಡಲಾಗಿದೆ. ಈ ಗುರುತಿನ ಚೀಟಿ ಉಳ್ಳವರು ಮತದಾನ ಮಾಡಿದ್ದು, ಈ ಮತದಾರರಿಂದ ಆಯ್ಕೆಯಾದ ಪಟ್ಟಣ ವ್ಯಾಪಾರಿ ಸಮಿತಿಗೆ ಆಯ್ಕೆಯಾದ ಅಭ್ಯರ್ಥಿಗಳ ವಿಜಯೋತ್ಸವ ನಡೆಯಲಿದೆ ಎಂದು ತಿಳಿಸಿದರು.

ಜ.20ರಂದು ಟೌನ್ ಹಾಲ್ ನಲ್ಲಿ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ಆಚರಿಸಲಾಗುವುದು. ಈ ಕಾರ್ಯಕ್ರಮವನ್ನು ಮೇಯರ್ ಗೌತಮ್ ಕುಮಾರ್ ಉದ್ಘಾಟಿಸಲಿದ್ದು, ನಂತರ ವಿಜಯೋತ್ಸವವು ಮೆರವಣಿಗೆ ಮೂಲಕ ಫ್ರೀಡಂ ಪಾರ್ಕ್ ಗೆ ಬಂದು ಸೇರಲಿದೆ. ಈ ಸಂದರ್ಭದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿರುವ ಬೀದಿ ಬದಿ ವ್ಯಾಪಾರಿಗಳಿಗೆ ಸಮೀಕ್ಷೆ ನಡೆಸಬೇಕು. ಅವರಿಗೆ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣ ಪತ್ರ ನೀಡಬೇಕು. ಬೀದಿ ಬದಿ ವ್ಯಾಪಾರಿಗಳಿಗೆ ಅವರ ಸ್ಥಳದಲ್ಲೇ ಮಾರುಕಟ್ಟೆ ಸ್ಥಾಪನೆ ಬೀದಿ ಬದಿ ವ್ಯಾಪಾರಿಗಳನ್ನು ತೆರವು ಗೊಳಿಸುವುದನ್ನು ನಿಲ್ಲಿಸುವುದು. ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸವಲತ್ತುಗಳನ್ನು ನೀಡಬೇಕು. ಪ್ರಧಾನಮಂತ್ರಿ ಜೀವನ, ಜ್ಯೋತಿ ಭೀಮಾ ಯೋಜನೆಯನ್ನು ಸುರಕ್ಷಿತವಾಗಿ ಜಾರಿಗೊಳಿಸಬೇಕು. ವಾಸದ ಮನೆ ಅಥವಾ ನಿವೇಶನ ನೀಡಬೇಕು. ಬೀದಿ ಬದಿ ವ್ಯಾಪಾರಿಗಳ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು. ಬೀದಿ ಬದಿ ವ್ಯಾಪರಿಗಳಿಗೆ ಬಿಸಿ ಊಟ ನೀಡುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಬೀದಿ ಬದಿ ವ್ಯಾಪಾರಿಗಳ ಒಕ್ಕೂಟವು ಸರ್ಕಾರದ ಮುಂದಿಟ್ಟಿದೆ.

ಫ್ರೆಶ್ ನ್ಯೂಸ್

Latest Posts

Featured Videos