ಇಂತಹ ಶಿಕ್ಷಕನನ್ನು ಬಿಟ್ಟು ಕೊಡುವುದಿಲ್ಲ

ಇಂತಹ ಶಿಕ್ಷಕನನ್ನು ಬಿಟ್ಟು ಕೊಡುವುದಿಲ್ಲ

ಚಾಮರಾಜ ನಗರ, ನ. 30 : ಸಮಾಜವನ್ನು ರೂಪಿಸುವ ಶಿಕ್ಷಕರಿಂದ ಏನೆಲ್ಲಾ ಸಾಧ್ಯಎಂಬುದಕ್ಕೆ ಹನೂರು ತಾಲೂಕಿನ ಮೀಣ್ಯಂ ಶಿಕ್ಷಕ ಪಿ. ಮಹಾದೇವಸ್ವಾಮಿ ಮಾದರಿ. ಶಾಲಾ ಮಕ್ಕಳ ಅಚ್ಚು ಮೆಚ್ಚಿನ ಶಿಕ್ಷಕ ದಿಢೀರ್ ವರ್ಗಾವಣೆ ಆಗಿರುವುದನ್ನು ತಿಳಿದ ಶಾಲಾ ಮಕ್ಕಳು ರೋಧಿಸಿ ಪ್ರತಿಭಟನೆ ನಡೆಸಿರುವ ಘಟನೆ ಹನೂರು ತಾಲೂಕಿನ ಮೀಣ್ಯಂನಲ್ಲಿ ನಡೆದಿದೆ.
ಶಿಕ್ಷಕ ಪಿ. ಮಹಾದೇವಸ್ವಾಮಿ ಎಂಬವರನ್ನು ಮೀಣ್ಯಂ ಶಾಲೆಯಿಂದ ಲೊಕ್ಕನಹಳ್ಳಿ ಶಾಲೆಗೆ ದಿಢೀರ್ ನಿಯೋಜಿಸಲಾಗಿತ್ತು. ಈ ವಿಚಾರ ತಿಳಿದ ವಿದ್ಯಾರ್ಥಿಗಳು ನೆಚ್ಚಿನ ಶಿಕ್ಷಕರು ಬೇಕೆ ಬೇಕೆಂದು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ವಿದ್ಯಾರ್ಥಿಗಳ ಜೊತೆಗೆ ಗ್ರಾಮಸ್ಥರು ಇದಕ್ಕೆ ದನಿಗೂಡಿಸಿದ್ದಾರೆ. ತಮ್ಮ ಶಾಲೆಗೆ ಮತ್ತೆ ಮಹಾದೇವಸ್ವಾಮಿ ನಿಯೋಜನೆ ಆಗದಿದ್ದರೇ ಶನಿವಾರದಿಂದ ಯಾರೂ ಶಾಲೆಗೆ ಬರುವುದಿಲ್ಲ ಎಂದು ಮಕ್ಕಳು ಎಚ್ಚರಿಸಿದ್ದು ಗ್ರಾಮಸ್ಥರು ಶಿಕ್ಷಣ ಇಲಾಖೆಯ ವಿರುದ್ಧ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.
ವರ್ಗಾವಣೆಯಾದ ಪಿ. ಮಹಾದೇವಸ್ವಾಮಿ ಕಳೆದ 4 ವರ್ಷದಿಂದ ಮೀಣ್ಯಂ ಶಾಲೆಯಲ್ಲಿದ್ದು ಕನ್ನಡ, ಇಂಗ್ಲಿಷ್ ಜೊತೆಗೆ ದೈಹಿಕ ಶಿಕ್ಷಣ ಶಿಕ್ಷಕರು ಇಲ್ಲದಿದ್ದರಿಂದ ಅದರ ಜವಾಬ್ದಾರಿಯನ್ನು ಹೊತ್ತಿದ್ದರು. ಇದರೊಟ್ಟಿಗೆ ಬಿಸಿಯೂಟದ ಮೇಲ್ವಿಚಾರಣೆಯನ್ನು ವಹಿಸಿಕೊಂಡು ಮಕ್ಕಳಿಗೆ ಶುಚಿ-ರುಚಿಯಾದ ಬಿಸಿಯೂಟ ಸಿಗುವಂತೆ ಮಾಡಿದ್ದರು ಎಂದು ಗ್ರಾಮಸ್ಥರಾದ ಮಾದೇಶ್ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos