ಬೆಂಗಳೂರು, ಮೇ. 22, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯ ಫಲಿತಾಂಶದ ಹೊತ್ತಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೊಸದೊಂದು ಬಾಂಬ್ ಸಿಡಿಸಿದ್ದಾರೆ ನಾಳೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಕಾಂಗ್ರೆಸ್ ನ 20-22 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಬಿ ಎಸ್ ಯಡಿಯೂರಪ್ಪ ಬಾಂಬ್ ಸಿಡಿಸಿದ್ದಾರೆ. ಚುನಾವಣಾ ಪ್ರಚಾರ ಪ್ರಾರಂಭದ ದಿನದಿಂದಲೂ ಸಾಕಷ್ಟು ಅಭ್ಯರ್ಥಿಗಳು ಪಕ್ಷಾಂತರಗೊಂಡಿದ್ದಾರೆ. ಮೇ 23 ರಂದು ಚುನಾವಣಾ ಫಲಿತಾಂಶದ ನಂತರ ಸಾಕಷ್ಟು ಬದಲಾವಣೆಗಳಾಗಲಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಇದು ದೋಸ್ತಿ ಸರ್ಕಾರದಲ್ಲಿ ದೊಡ್ಡ ತಲ್ಲಣವನ್ನೇ ಸೃಷ್ಟಿಮಾಡಿದೆ.