ಕಾಂಗ್ರೆಸ್ ವಿರುದ್ದ ಹೊಸ ಪೋಸ್ಟ್‌ ಬಿಡುಗಡೆ ಮಾಡಿದ ಬಿಜೆಪಿ

ಕಾಂಗ್ರೆಸ್ ವಿರುದ್ದ ಹೊಸ ಪೋಸ್ಟ್‌ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನದಿಂದ ಓಲೈಕೆ, ತುಷ್ಟೀಕರಣದ ರಾಜಕಾರಣ ಮುಂದುವರೆಸಿದೆ. ಕಾನೂನು – ಸುವ್ಯವಸ್ಥೆ ಸಂಪೂರ್ಣ ಕುಸಿದುಹೋಗಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಟೀಕಿಸಿದರು.

ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಓಲೈಕೆ ಜೊತೆಗೆ ಭಯೋತ್ಪಾದಕರ ವಿಚಾರದಲ್ಲಿ ಮೃದು ಧೋರಣೆ ಈ ಸರ್ಕಾರದ್ದು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕಾಂಗ್ರೆಸ್ ಡೇಂಜರ್ ಪೋಸ್ಟರ್ ಇವತ್ತು ಬಿಡುಗಡೆ ಮಾಡಿದ್ದೇವೆ. ಕ್ಯೂ ಆರ್ ಕೋಡ್ ಕೊಟ್ಟಿದ್ದು, ಘಟನಾವಳಿಗಳನ್ನು ವೀಕ್ಷಿಸಬಹುದು ಎಂದರು. ನೇಹಾ ಹಿರೇಮಠದ ಹತ್ಯೆಯ ಲವ್ ಜಿಹಾದ್ ಸಂಬಂಧಿತ ಹುಬ್ಬಳ್ಳಿಯ ಘಟನೆ, ಸಿಎಂ ಹೇಳಿಕೆ, ಗೃಹ ಇಲಾಖೆ, ಕಮೀಷನರ್ ನಡವಳಿಕೆ ನೇಹಾ ಪೋಷಕರಿಗೆ, ಕುಟುಂಬಕ್ಕಾದ ನೋವನ್ನು ಗಮನಿಸಬಹುದು. ಕಾಲೇಜಿಗೆ ಹೆಣ್ಮಕ್ಕಳು ಹೋಗಬೇಕೇ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಳವಳ ಸೂಚಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos