ಬೆಂಗಳೂರು, ಜ. 01: ನಗರದಲ್ಲಿ ಸಂಭ್ರಮಾಚರಣೆಗೆ ಹಾಟ್ ಫೆವರಿಟ್ ತಾಣಗಳಾದ ಎಂ.ಜಿ.ರಸ್ತೆ, ಚರ್ಚ್ ಸ್ಟ್ರೀಟ್, ಕಮರ್ಷಿಯಲ್ ಸ್ಟ್ರೀಟ್ ಸೇರಿದಂತೆ ನಾನಾ ಭಾಗದಲ್ಲಿ ಇನ್ನು ಮುಂದೆ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ ಹಾಕವುದಕ್ಕೆ ರಾಜ್ಯ ಸರಕಾರ ಮುಂದಾಗಿದೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದಸಚಿವ ವಿ.ಸೋಮಣ್ಣ ನೂತನ ವರ್ಷದ ಸಂಭ್ರಮದಲ್ಲಿ ಹಲ್ಲೆ ಪ್ರಕರಣಗಳು ಸಂಭವಿಸುತ್ತಿದ್ದು, ಇನ್ಮುಂದೆ ಈ ಪ್ರದೇಶಗಳಲ್ಲಿ ಹೊಸ ವರ್ಷ ಆಚರಿಸಬೇಕಾ? ಬೇಡವಾ? ಎಂಬ ಬಗ್ಗೆ ಯೋಚನೆ ಮಾಡಬೇಕಿದೆ. ಈ ಕುರಿತು ಸಿಎಂ ಮತ್ತು ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದರು.