ಮಂಡ್ಯ: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು ರಾಜ್ಯದಲ್ಲೇ ಅಭ್ಯರ್ಥಿಗಳು ನಾಮ ಪತ್ರಿಕೆಯನ್ನು ಸಲ್ಲಿಸುತ್ತಿದ್ದಾರೆ ಇಂದು ನಾಮಪತ್ರಿಕೆ ಸಲ್ಲಿಕೆಗೆ ಕೊನೆ ದಿನಾಂಕವಾಗಿರುವುದರಿಂದ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಕೆಗೆ ಮುಂದಾಗಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿಯವರು ಸ್ಪರ್ಧಿಸುತ್ತಿದ್ದಾರೆ.
ಮಂಡ್ಯದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಮಾತನಾಡಿದ ಅವರು, ತನ್ನ ರಾಜಕೀಯ ಜೀವನದುದ್ದಕ್ಕೂ ಜನರಿಗಾಗಿ ಹೆಚ್ಡಿಕೆಯವರ ಹೃದಯ ಮಿಡಿದಿದೆ. ಈ ಕಾರಣದಿಂದಲೇ ಜನರು ಹೃದಯವಂತ ಅಂತ ಕರೆಯುತ್ತಾರೆ ಎಂದರು. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರದು ರೈತರಿಗಾಗಿ ನಡೆಯುವಂತಹ ಹೃದಯ ಯಾವಾಗಲೂ ಅವರು ರೈತರ ಕಣ್ಮಣಿಯಾಗಿದ್ದು, 30 ವರ್ಷಗಳ ತಮ್ಮ ರಾಜಕೀಯ ಜೀವನದುದ್ದಕ್ಕೂ ಅವರು ರೈತರ ಸೇವೆ ಮಾಡಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.