ಮಂಡ್ಯ, ಮಾ. 29, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಒಂದೇ ಒಂದು ಸ್ಥಾನ ಗೆಲ್ಲುವುದು ಕೂಡ ಕಠಿಣವಾಗಲಿದೆ ಎಂದು ಬಿಜೆಪಿ ಮುಖಂಡ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀರಾಮುಲು ಗುಪ್ತಚರ ಮಾಹಿತಿ ಪ್ರಕಾರ, ಜೆಡಿಎಸ್ ಒಂದು ಸ್ಥಾನವನ್ನು ಗೆಲ್ಲುವುದಿಲ್ಲ. ಹೀಗಾಗಿ ಜೆಡಿಎಸ್ ಮುಖಂಡರು ಬೇರೆ ಯಾವುದೇ ಕ್ಷೇತ್ರಕ್ಕೆ ಹೋಗದೇ ಮಂಡ್ಯ, ತುಮಕೂರು, ಹಾಸನದಲ್ಲಿ ಮಾತ್ರ ಪ್ರಚಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು. ಮಂಡ್ಯದಲ್ಲಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಸೋಲುತ್ತಾರೆ. ತುಮಕೂರಿನಲ್ಲಿ ದೇವೇಗೌಡರು ಸೋಲುತ್ತಾರೆ. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋಲುತ್ತಾರೆ ಎಂದು ಭವಿಷ್ಯವನ್ನು ನುಡಿದ್ದಾರೆ.