ನಿಖಿಲ್ ಹೆಗಲಿಗೆ ಬಿತ್ತು ಹೊಸ ಜವಾಬ್ದಾರಿ

ನಿಖಿಲ್ ಹೆಗಲಿಗೆ ಬಿತ್ತು ಹೊಸ ಜವಾಬ್ದಾರಿ

ಮಂಡ್ಯ, ಮೇ. 10, ನ್ಯೂಸ್ ಎಕ್ಸ್ ಪ್ರೆಸ್: ನಿಖಿಲ್ ಕುಮಾರಸ್ವಾಮಿ ಹೆಗಲ ಮೇಲೆ ಮತ್ತೊಂದು ಜವಬ್ದಾರಿ ಬಿದ್ದಿದೆ. ಒಂದು ವೇಳೆ ನಿಖಿಲ್ ಸೋತರು ಅವರಿಗೆ ಸಚಿವ ಸ್ಥಾನ ನೀಡಬೇಕು ಅಂದು ಕೆಲವು ಜೆಡಿಎಸ್ ಕಾರ್ಯಕರ್ತರು ತಿಳಿಸಿದ್ದರು. ಲೋಕಸಭಾ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದಾರೆ..

ಮುಂಬರುವ ದಿನಗಳಲ್ಲಿ ಮಂಡ್ಯದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆ ಜವಾಬ್ದಾರಿಯನ್ನು ನಿಖಿಲ್ ವಹಿಸಿಕೊಂಡಿದ್ದು, ಕೆ.ಆರ್ ಪೇಟೆಪುರಸಭೆ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಪೂರ್ವಭಾವಿ ಸಭೆ ಇಂದು ನಡೆಯುತ್ತಿದ್ದು, ಈ ಸಭೆಯಲ್ಲಿ ನಿಖಿಲ್ ಪಾಲ್ಗೊಳ್ಳುತ್ತಿದ್ದಾರೆ ಎಂದು ತಿಳಿದಿಬಂದಿದೆ. ಕೆ.ಆರ್ . ಪೇಟೆ ಶಾಸಕ ನಾರಾಯಣ ಗೌಡ ನಿವಾಸದಲ್ಲಿ ಜೆಡಿಎಸ್ ಮುಖಂಡರ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ ರಮೇಶ್ , ಸಚಿವ ಸಿ.ಎಚ್.ಪುಟ್ಟರಾಜು ಪಾಲ್ಗೊಳ್ಳಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos