ಫಲಿತಾಂಶಕ್ಕೂ ಮುನ್ನವೇ `ನಿಖಿಲ್ ಕೆ. ಸಂಸದರು’ ಬೋರ್ಡ್.!

ಫಲಿತಾಂಶಕ್ಕೂ ಮುನ್ನವೇ `ನಿಖಿಲ್ ಕೆ. ಸಂಸದರು’ ಬೋರ್ಡ್.!

ಮಂಡ್ಯ, ಏ. 19, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಭಾರೀ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭೆ ಚುನಾವಣೆಗೆ ನಿನ್ನೆಯಷ್ಟೆ ಮತದಾನ ಮುಗಿದಿದೆ, ಫಲಿತಾಂಶಕ್ಕೂ ಮುನ್ನವೇ ನಿಖಿಲ್ ಕೆ. ಸಂಸದರು ಎಂಬ ಬೋರ್ಡ್ ಫೇಸ್ ಬುಕ್ ನಲ್ಲಿ ವೈರಲ್ ಆಗಿದೆ.

ಕರ್ನಾಟಕ ಜೆಡಿಎಸ್ ಪಕ್ಷದ ಫೇಸ್ ಬುಕ್ ಪೇಜ್ ಪೋಸ್ಟ್ ನಲ್ಲಿ `ನಿಖಿಲ್ ಕೆ. ಸಂಸದರು. ಮಂಡ್ಯ ಲೋಕಸಭಾ ಕ್ಷೇತ್ರ ಎಂದು ಬರೆದಿರುವ ಬೋರ್ಡ್ ಅಭಿಮಾನಿಯಿಂದ ನಿಖಿಲ್ ಕುಮಾರಸ್ವಾಮಿ ಅವರಿಗೆ ಉಡುಗೊರೆ ಎಂದು ಬರೆಯಲಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಸ್ಪರ್ಧಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos