ನಿಖಿಲ್ ಮಂಡ್ಯದಲ್ಲಿ ಗೆಲುವು ಸಾಧಿಸಲಿದ್ದಾರೆ: ದಿನೇಶ್ ಗುಂಡೂರಾವ್

ನಿಖಿಲ್ ಮಂಡ್ಯದಲ್ಲಿ ಗೆಲುವು ಸಾಧಿಸಲಿದ್ದಾರೆ: ದಿನೇಶ್ ಗುಂಡೂರಾವ್

ದಾವಣಗೆರೆ, ಏ. 10, ನ್ಯೂಸ್ ಎಕ್ಸ್ ಪ್ರೆಸ್: ಮಂಡ್ಯ ಕ್ಷೇತ್ರದಲಲ್ಲಿ ಸುಮಲತಾ ಅವರು ಬಿಜೆಪಿ ಅಭ್ಯರ್ಥಿ ಎಂಬುದು ಮೋದಿಯವರ ಹೇಳಿಕೆಯಿಂದ ಗೊತ್ತಾಗಿದೆ. ಮಂಡ್ಯದಲ್ಲಿ ನಿಖಿಲ್ ಭಾರೀ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿದ್ದಾರೆ. ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಎಚ್. ಬಿ ಮಂಜಪ್ಪ ಪರ ಪ್ರಚಾರಕ್ಕೆಂದು ನಗರಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ಲೋಕಸಭಾ ಸದಸ್ಯರ ಸಾಧನೆ ಏನೂ ಇಲ್ಲ. ಹೀಗಾಗಿ ಮಂಜಪ್ಪನವರ ಗೆಲುವು ಖಚಿತ.

ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಬಿಜೆಪಿ ಬ್ರಾಂಚ್ ಆಗಿ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಲು ಆದಾಯ ತೆರಿಗೆ ಇಲಾಖೆ ಬಳಕೆ ಮಾಡಲಾಗ್ತಿದೆ. ಏರ್ ಸ್ಟೈಕ್, ಚುನಾವಣೆ ವಿಚಾರವಾಗಿ ಮೋದಿ ಬಳಕೆ ಮಾಡುತ್ತಿದ್ದಾರೆ. ಪ್ರತಿಯೊಂದು ಸಂಸ್ಥೆಯನ್ನು ಸರ್ವನಾಶ ಮಾಡಿದ್ದಾರೆ. ಯಡಿಯೂರಪ್ಪ ಮನೆ ಮೇಲೆ ಯಾಕೆ ದಾಳಿ ನಡೆಯೋಲ್ಲ? ಯಡಿಯೂರಪ್ಪ  200, 300 ಕೋಟಿ ಹಣವನ್ನು ಮನೆಯಲ್ಲಿ ಇಟ್ಟುಕೊಂಡು ಆಪರೇಶನ್ ಕಮಲ ಮಾಡುತ್ತಾರೆ ಎಂದು ಗುಂಡೂರಾವ್ ಆರೋಪಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos