ವಿಷ್ಣುವರ್ಧನ್‍ ಸ್ಮಾರಕ ನಿರ್ಮಾಣಕ್ಕೆ ಮತ್ತೆ

ವಿಷ್ಣುವರ್ಧನ್‍ ಸ್ಮಾರಕ ನಿರ್ಮಾಣಕ್ಕೆ ಮತ್ತೆ

ಮೈಸುರೂ, ಜೂ. 18: ನಟ ಡಾ.ವಿಷ್ಣುವರ್ಧನ್‍ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದೆ. ಕೋರ್ಟ್ ಆದೇಶದಂತೆ ಸ್ಮಾರಕ ನಿರ್ಮಾಣಕ್ಕೆ ಮುಂದಾದಾಗ ರೈತರು ತಡೆದ ಘಟನೆ ನಡೆದಿದೆ.

ಮೈಸೂರು ತಾಲೂಕು ಹಾಲಾಳು ಗ್ರಾಮದ ಸರ್ವೆ ನಂಬರ್ 8 ರಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ 2017ರಲ್ಲೇ ಸರ್ಕಾರ 5 ಎಕರೆ ಭೂಮಿ ನಿಗದಿ ಮಾಡಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ರೈತರು ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಸ್ಮಾರಕ ಮಾಡದಂತೆ ತಡೆಯಾಜ್ಞೆ ನೀಡಿತ್ತು.

ಆದರೆ, ಕೋರ್ಟ್ನಿಂರದ ತಡೆ ತಂದವರು ಮತ್ತೆ ಕೋರ್ಗೆಿ ವ ಹಾಜರಾಗದ ಹಿನ್ನೆಲೆಯಲ್ಲಿ ತಡೆಯಾಜ್ಞೆಯನ್ನು ಕೋರ್ಟ್ ತೆರವುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಡಾ.ವಿಷ್ಣುವರ್ಧನ್‍ ಸ್ಮಾರಕ ನಿರ್ಮಾಣಕ್ಕೆ ಮುಂದಾದಾಗ ರೈತರು ತಡೆದಿದ್ದಾರೆ. ಇದ್ರಿಂದಾಗಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos