ರಾಯಚೂರು, ಸೆ. 25 : ಸಿಂಧನೂರು ತಾಲೂಕಿನ ಬಂಗಾರ ಕ್ಯಾಂಪ್ ನಲ್ಲಿ ಶಾಲೆಗೆ ನೀರು ನುಗ್ಗಿದ್ದು ಮಕ್ಕಳು ಪರದಾಡುವಂತಾಗಿದೆ. ನೀರು ತುಂಬಿದ ಕೊಠಡಿಯಲ್ಲೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ. ಸಿರವಾರ ತಾಲೂಕಿನ ಅತ್ತನೂರು, ಚಾಗಭಾವಿಯಲ್ಲಿ ಹಳ್ಳ ತುಂಬಿಹರಿಯುತ್ತಿದ್ದು ಜಮೀನುಗಳಿಗೆ ನೀರು ನುಗ್ಗಿದೆ.
ನಗರದ ಹಲವೆಡೆ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಜನ ಪರದಾಡಿದ್ದಾರೆ. ಸಿಯತಲಾಬ್ ಪ್ರದೇಶದಲ್ಲಿ ಮನೆಗಳು ಜಲಾವೃತವಾಗಿವೆ. ಶ್ರೀರಾಮನಗರ ಕಾಲೋನಿಯಲ್ಲಿರುವ ಕೊದಂಡರಾಮ ದೇವಸ್ಥಾನ ಆವರಣ ಕೆರೆಯಂತಾಗಿದೆ. ಮಳೆಯಿಂದಾಗಿ ನಗರದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಮಾನ್ವಿಯ ಮುಷ್ಟೂರು ಸೇತುವೆ, ಲಿಂಗಸುಗೂರಿನ ಉಪ್ಪಾರ ನಂದಿಹಾಳ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿವೆ.