ಕಾಮುಕರಿಗಿಲ್ಲ ಇಲ್ಲ ಕ್ಷಮೆ..!

ಕಾಮುಕರಿಗಿಲ್ಲ ಇಲ್ಲ ಕ್ಷಮೆ..!

ಹೈದರಾಬಾದ್, ಡಿ. 6: ಎನ್ಕೌಂಟರ್ ಬೆನ್ನಲ್ಲೇ ಅತ್ಯಾಚಾರಿಗಳಿಗೆ ಕ್ಷಮಾದಾನ ಇಲ್ಲ, ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ನಿರ್ಧಾರ ಅತ್ಯಾಚಾರಿಗಳಲ್ಲಿ ಮತ್ತಷ್ಟು ನಡುಕ ಹುಟ್ಟಿಸಿದೆ.

ಶಿಕ್ಷೆಗೊಳಗಾದ ಅತ್ಯಾಚಾರಿಗಳಿಗೆ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷಿ ವಿಧಿಸಿದರೆ, ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಅವಕಾಶವಿತ್ತು. ಈ ಸರ್ಜಿ ಪರಿಶೀಲನೆ ನಡೆಸಿದ ಬಳಿಕ ರಾಷ್ಟ್ರಪತಿಗಳು ನೀಡುವ ತೀರ್ಪೇ ಅಂತಿಮವಾಗುತ್ತಿತ್ತು. ಆದರೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇದಕ್ಕೆ ತಿಲಾಂಜಲಿ ಇಟ್ಟಿದ್ದು, ಅತ್ಯಾಚಾರಿಗಳ ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ನಿರ್ಧಾರ ಪ್ರಕಟಿಸಿದ್ದಾರೆ.  ಶಿರೋಹಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ‘ಮಹಿಳಾ ಸುರಕ್ಷತೆ ಪ್ರಮುಖ ವಿಚಾರವಾಗಿ ಮಾರ್ಪಾಡಾಗಿದೆ. ಹೀಗಿರುವಾಗ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಆರೋಪಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕು ಇರುವುದಿಲ್ಲ.

 

ಫ್ರೆಶ್ ನ್ಯೂಸ್

Latest Posts

Featured Videos