ನಾಮಪತ್ರ ಸಲ್ಲಿಕೆ

ನಾಮಪತ್ರ ಸಲ್ಲಿಕೆ

ಬೆಂಗಳೂರು, ನ. 29: ರಾಜ್ಯಸಭಾ ಸದಸ್ಯತ್ವಕ್ಕೆ  ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ರಾಜ್ಯಸಭಾ ಸದಸ್ಯ ಕೆಸಿ ರಾಮಮೂರ್ತಿ ಅವರು ಇಂದು ವಿಧಾನ ಸೌಧದ ಮೂರನೇ ಕೊಠಡಿಯಲ್ಲಿ ವಿಧಾನಸಭಾ ಕ್ಷೇತ್ರದ ಸ್ಪೀಕರ್ ಕಚೇರಿಯಲ್ಲಿ ಚುನಾವಣಾಧಿಕಾರಿ ವಿಶಾಲಾಕ್ಷಿ  ಅವರಿಗೆ ನಾಮಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಸಚಿವ ಆರ್. ಅಶೋಕ್  ಉಪ ಮುಖ್ಯಮಂತ್ರಿ ಅಶ್ವತ್ ನಾರಾಯಣ್, ಶಾಸಕ ಎಂ. ಸತೀಶ್ ರೆಡ್ಡಿ, ರವಿಸುಬ್ರಹ್ಮಣ್ಯ, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವಾರು ಬಿಜೆಪಿ ಮುಖಂಡರೊಂದಿಗೆ ತೆರಳಿ ನಾಮ ಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಕೆ.ಸಿ.ರಾಮಮೂರ್ತಿ ನಾಮ ಪತ್ರ ಸಲ್ಲಿಸಿ ಮಾತನಾಡಿ, ಪಕ್ಷದ ಸಿದ್ಧಾಂತ ಹಾಗೂ ಮುಖಂಡರ ಮಾರ್ಗದರ್ಶನದಲ್ಲಿ ಪಕ್ಷದ ಸಂಘಟನೆ ಅಭಿವೃದ್ಧಿಗಾಗಿ  ನಾನು ಶ್ರಮಿಸುತ್ತೇನೆ ಎಂದು ತಿಳಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos