ವದಂತಿಗೆ ಯಾರು ಕಿವಿಕೊಡ ಬೇಡಿ : ಜೊಲ್ಲೆ

ವದಂತಿಗೆ ಯಾರು ಕಿವಿಕೊಡ ಬೇಡಿ : ಜೊಲ್ಲೆ

ವಿಜಯಪುರ, ಡಿ. 23 : ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರತಿಪಕ್ಷಗಳು ಜನರ ದಾರಿ ತಪ್ಪಿಸುತ್ತಿದೆ. ಇಂತಹ ವದಂತಿಗೆ ಯಾರೂ ಕಿವಿಕೊಡಬೇಡಿ ಎಂದು ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಜನರಿಗೆ ಕಿವಿಮಾತು ಹೇಳಿದ್ದಾರೆ.
ವಿಜಯಪುರದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ದಂಪತಿಗೆ ಸನ್ಮಾನ ಸಮಾರಂಭ ದಲ್ಲಿ ಮಾತನಾಡಿದರು.
ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಸೀರೆ ಕೊಟ್ಟು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜೋಗೂರ ಸನ್ಮಾನಿಸಿದರು. ಇನ್ನು ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ಗಣ್ಯರು ಶಾಲು ಹೊದಿಸಿ ಸನ್ಮಾನಿಸಿದರು. ಇದೆ ವೇಳೆ ಮಾತನಾಡಿದ ಅಣ್ಣಾ ಸಾಹೇಬ್ ಜೊಲ್ಲೆ, ಪೌರತ್ವ ಕಾಯ್ದೆಯ ಬಗ್ಗೆ ಪ್ರತಿಪಕ್ಷಗಳು ಜನರನ್ನು ತಪ್ಪು ದಾರಿಗೆಳೆಯುತ್ತಿವೆ. ಇಂಥ ವದಂತಿಗಳಿಗೆ ಯಾರೂ ಕಿವಿಗೊಡಬಾರದು. ಅಲ್ಲದೆ ಪೌರತ್ವ ಕಾಯ್ದೆಯಿಂದ ಭಾರತೀಯ ಮುಸ್ಲಿಮರಿಗೆ ಯಾವುದೇ ತೊಂದರೆಯಿಲ್ಲ. ಹೋರಾಟ ಮಾಡುವವರು ಈ ಕಾಯ್ದೆಯ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos