ಪ್ರಧಾನಿ ಹಸಿರು ನಿಶಾನೆ ತೋರಿದ್ದ ವಂದೇ ಭಾರತ್ ರೈಲಿನ 10 ದಿನದ ಟಿಕೆಟ್ ಸೋಲ್ಡ್ ಔಟ್

ಪ್ರಧಾನಿ ಹಸಿರು ನಿಶಾನೆ ತೋರಿದ್ದ ವಂದೇ ಭಾರತ್ ರೈಲಿನ 10 ದಿನದ ಟಿಕೆಟ್ ಸೋಲ್ಡ್ ಔಟ್

ನವದೆಹಲಿ: ದೇಶದ ಅತೀ ವೇಗದ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ನ ಮುಂದಿನ 10 ದಿನ ಪ್ರಯಾಣದ ಟಿಕೆಟ್ ಸೋಲ್ಡ್ ಔಟ್ ಆಗಿದೆ.

ಪ್ರಧಾನಿ ಮೋದಿಯವರು ದೆಹಲಿಯಿಂದ ವಾರಣಾಸಿಗೆ ತೆರಳುವ ಈ ರೈಲಿಗೆ ಹಸಿರು ನಿಶಾನೆ ತೋರಿದ್ದರು. ಆದರೆ ಎರಡನೆ ದಿನವೇ ಅದರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದೀಗ ರೈಲನ್ನು ಸಂಪೂರ್ಣ ಸಜ್ಜುಗೊಳಿಸಲಾಗಿದ್ದು, ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗಿದೆ.

ಸೋಮವಾರ ಮತ್ತು ಗುರುವಾರ ಹೊರತುಪಡಿಸಿ ವಾರದಲ್ಲಿ ಐದು ದಿನ ಈ ರೈಲು ದೆಹಲಿ ಮತ್ತು ವಾರಾಣಸಿ ನಡುವೆ ಸಂಚರಿಸಲಿದೆ. ಸೋಮವಾರ ಅಧಿಕೃತ ಸಂಚಾರ ಆರಂಭಿಸಿದ ಬಳಿಕ ಮುಂದಿನ ಹತ್ತು ದಿನಗಳ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos