ಚಾಮರಾಜನಗರ , 16. ಆ : ಹಣಕಾಸಿನ ತೊಂದರೆಯೇ ಒಂದೇ ಕುಟುಂದ ಐವರು ಸಾಮೂಹಿಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಮೈಸೂರಿನ ದಟ್ಟಗಳ್ಳಿ ನಿವಾಸಿಗಳಾದ ಓಂ ಪ್ರಕಾಶ್ (36) , ಪತ್ನಿ ನಿಖಿತಾ(30), ಮಗ ಆರ್ಯ ಕೃಷಣ( 4) , ತಾಯಿ ಹೇಮಲತಾ (60), ತಂದೆ ನಾಗರಾಜು ಭಟ್ಟಾಚಾರ್ಯ (65) ಆತ್ಮಹತ್ಯೆಗೆ ಶರಣಾದವರು.
ಸ್ಥಳಕ್ಕೆ ಗುಂಡ್ಲುಪೇಟೆ ಪೋಲಿಸರು ಭೇಟಿ ನೀಡಿ ಸೆಕ್ಷನ್ 302, 306 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ .ಈಗಾಗಲೇ ಮೋಹನ್ ನೇತೃತ್ವದಲ್ಲಿ ಒಂದು ತನಿಖಾ ತಂಡ ನೇಮಿಸಲಾಗಿದೆ ಎಂದು ಚಾಮರಾಜನಗರ ಪೋಲಿಸ್ ವರಿಷ್ಠಾಧಿಕಾರಿ ಆನಂದ ಕುಮಾರ್ ಹೇಳಿಕೆ ನೀಡಿದ್ದಾರೆ .