ಬೆಂಗಳೂರು, ಡಿ. 23: ಪೌರತ್ವ ಕಾಯ್ದೆ ಬಗ್ಗೆ ನಗರದಲ್ಲಿ ಪ್ರತಿಭಟನೆ ನಡೆದರೆ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಯಲಿದೆ. ಕಾಯ್ದೆ ಖಂಡಿಸಿ ಹತ್ತಾರು ಸಂಘಟನೆಗಳು, ಸಾವಿರಾರು ಜನ ರೋಡಿಗಿಳಿಯಲಿದ್ದಾರೆ. ಆದರೆ, ಅರ್ಧ ಗಂಟೆ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಿದ್ದು, ಅದಕ್ಕೂ ಮೀರಿ ಪ್ರತಿಭಟನೆ ನಡೆಸಿದ್ರೆ ಕಾನೂನು ಕ್ರಮ ಗ್ಯಾರೆಂಟಿ ಅಂತ ಪೊಲೀಸರು ಗುಡುಗಿದ್ದಾರೆ. ಅಲ್ಲದೆ ಪೊಲೀಸರು ಗುರುತಿಸಿದ ಸರ್ಕಲ್ನಲ್ಲೇ ಪ್ರತಿಭಟನೆ ನಡೆಸಬೇಕು. ಅದು ಬಿಟ್ಟು ಬೇರೆಡೆ ಪ್ರತಿಭಟನೆ ನಡೆಸುವಂತಿಲ್ಲ
ಕಲಬುರಗಿ, ಮೈಸೂರು, ರಾಮನಗರ, ಗದಗ ಸೇರಿದಂತೆ ರಾಜ್ಯದೆಲ್ಲೆಡೆ ಮುಸ್ಲಿಂ ಸಂಘಟನೆಗಳು ಪ್ರತಿಭಟನೆಗೆ ಕರೆಕೊಟ್ಟಿದೆ.