ಒಂಟಿ ಸಲಗ ಮೃತ

ಒಂಟಿ ಸಲಗ ಮೃತ

ಚಿಕ್ಕಮಗಳೂರು, ಡಿ. 5 : ಜಿಲ್ಲೆಯ ಕಡೂರು ತಾಲೂಕಿನಲ್ಲಿ ವಿದ್ಯುತ್ ತಗುಲಿ ಒಂಟಿ ಸಲಗ ಮೃತಪಟ್ಟಿರುವ ಘಟನೆ ನಡೆದಿದೆ.
ಕಡೂರು ತಾಲೂಕು ಹಳೆಸಿದ್ಧರಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು, 20 ರಿಂದ 25 ವರ್ಷದ ಕಾಡಾನೆ ಸಾವನ್ನಪ್ಪಿದೆ. ಹಸಿವಿನಿಂದ ಗ್ರಾಮದ ಕಡೆಗೆ ಬಂದ ಆನೆ ಜೋಳದ ಗದ್ದೆಗೆ ನುಗ್ಗಲು ಯತ್ನಿಸಿದಾಗ ಅಲ್ಲಿ ಫೆನ್ಸಿಗೆ ಅಳವಡಿಸಿದ್ದ ವಿದ್ಯುತ್ ಪ್ರವಹಿಸಿ ಆನೆ ಮೃತಪಟ್ಟಿದೆ. ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಗೆ ಸುದ್ದಿ ತಿಳಿಸಿದ್ದಾರೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos