ತಾ.ಪಂ ಸಭಾಂಗಣ ಉದ್ಘಾಟನೆ

ತಾ.ಪಂ ಸಭಾಂಗಣ ಉದ್ಘಾಟನೆ

ದೇವನಹಳ್ಳಿ: ಬುದ್ಧ, ಬಸವ ಅಂಬೇಡ್ಕರ್ ರವರ ತತ್ವ ಆದರ್ಶಗಳನ್ನು ಮನದಲ್ಲಿಟ್ಟುಕೊಂಡು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಪಕ್ಷಾತೀತವಾಗಿ ಮಾಡುತ್ತಿದ್ದು ಅಭಿವೃದ್ಧಿ ವಿಚಾರದಲ್ಲಿ ನಾನು ನನ್ನದು ಎನ್ನುವುದನ್ನು ಬಿಟ್ಟು ಸಾರ್ವಜನಿಕವಾಗಿ ಕೆಲಸ ಮಾಡಬೇಕು ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.

ಅವರು ದೇವನಹಳ್ಳಿ ಪಟ್ಟಣದ ಟಿಪ್ಪು ಉದ್ಯಾನವನ ಮುಂಭಾಗದ ತಾಲ್ಲೂಕು ಪಂಚಾಯತಿ ಕಟ್ಟಡದಲ್ಲಿ ತಾಲ್ಲೂಕು ಪಂಚಾಯತಿಯ ನೂತನ ಹವಾನಿಯಂತ್ರಿತ ಸುಸಜ್ಜಿತ ಸಭಾಂಗಣವನ್ನು ಶಾಸಕ ನಿಸರ್ಗ ನಾರಾಯಣಸ್ವಾಮಿ ಟೇಪ್ ಕತ್ತರಿಸಿ ದೇವರಿಗೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟನೆ ಮಾಡಲಾಯಿತು.

ತಾಲೂಕಿನ ಅಭಿವೃದ್ಧಿ ಚುರುಕುಗೊಳ್ಳಬೇಕಾದರೆ ಅಧಿಕಾರಿಗಳು ಇಚ್ಚಾಶಕ್ತಿ ತೋರಬೇಕು ಎರಡುವರೆ ವರ್ಷಗಳ ಹಿಂದೆ ಮಾಡಿರುವ ಗುದ್ದಲಿ ಪೂಜೆಯ ಕಾಮಗಾರಿಗಳನ್ನು ಮಾಡುತ್ತಿದ್ದೇವೆ ವಿನಃ ಈಗ ಸರ್ಕಾರದಿಂದ ಯಾವುದೇ ಅನುದಾನ ಬಿಡುಗಡೆಯಾಗಿಲ್ಲಾ ನಮಗೆ ಮತ ಹಾಕಿರುವ ಜನರಿಗೆ ಮೋಸವಾಗಲು ಬಿಡುವುದಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಕುಡಿಯುವ ನೀರಿನ ಆಹಾಕಾರದ ಬಗ್ಗೆ ಮಾಹಿತಿ ನೀಡಿದ್ದು ನಮ್ಮ ತಾಲ್ಲೂಕನ್ನು ಬರ ಎನ್ನುವುದಾಗಿ ಘೋಷಣೆ ಮಾಡಿ ಎಂದು ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos