ಕಲಬುರ್ಗಿ: ಆಪರೇಷನ್
ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ರಚನೆ ಬಗ್ಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇಲಾಖೆಗೆ
ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಎಸ್ ಐಟಿ ಯಾರನ್ನೇ ಮುಖ್ಯಸ್ಥರನ್ನಾಗಿ ನಿಯೋಜನೆ ಮಾಡಿದ್ರೂ, ಕೆಲಸ ಮಾಡಲೇಬೇಕಾಗುತ್ತದೆ ಎಂದರು. ಇನ್ನು ಬಿಜೆಪಿಯವರು ಸರ್ಕಾರ ಬೀಳುತ್ತದೆ ಎನ್ನವು ಡೆಡ್ ಲೈನ್ ಕೊಡುತ್ತಲೇ ಇದ್ದಾರೆ.
ಬಿಜೆಪಿ 22 ಸೀಟು ಗೆಲ್ಲಲ್ಲ. ಅಧಿಕಾರಕ್ಕೂ ಬರಲ್ಲೂ. ಇಲಾಖೆ ಸಮಗ್ರ ಅಭಿವೃದ್ಧಿಗೆ ಡಿಜಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದೇವೆ. ಔರಾದ್ಕರ್ ಕಮಿಟಿ ವರದಿ ಜಾರಿಗೊಳಿಸುವ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದರು.