ಬೆಂಗಳೂರು : ಮಲ್ಟಿಪ್ಲೆಕ್ಸ್ ಸಮೂಹ ಸಂಸ್ಥವತಿಯಿಂದ ಹತ್ತು ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಯು ಕರ್ನಾಟಕ ಕಾರಾಗೃಹ ಮತ್ತು ಸುಧಾರಣ ಸೇವೆಗಳ ಇಲಾಖೆ ಬೆಂಗಳೂರು ಕೇಂದ್ರ ಕಾರಾಗೃಹದ ಆರೋಗ್ಯ ಕೇಂದ್ರಕ್ಕೆ ಮತ್ತು ತುಮಕೂರು ಜಿಲ್ಲಾಡಳಿತಕ್ಕೆ ತಲಾ 5 ಆಕ್ಸಿಜನ್ ಕಾನ್ಸಂಟ್ರೇಟರ್ಗಳು ಒದಗಿಸಲಾಯಿತು.
ಬಳಿಕ ಬೆಂಗಳೂರು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಾನರಾದ ಡಾ. ಪಿ. ರಂಗನಾಥ್ ಮಾತನಾಡಿ, ಪ್ರಸ್ತುತ ಕೋವಿಡ್ ನಿರ್ವಹಣೆಯಲ್ಲಿ ಅಗತ್ಯವಾಗಿ ಬೇಕಾದ ಆಕ್ಸಿಜನ್ ಕಾನ್ಸಂಟ್ರೇಟರ್ ಒದಗಿಸುವುದು ಅತ್ಯಂತ ಸಂತೋಷದ ವಿಷಯವಾಗಿದ್ದು, ಇದಕ್ಕಾಗಿ ಮಲ್ಟಿಪ್ಲೆಕ್ಸ್ ಸಂಸ್ಥೆಗೆ ಧನ್ಯವದ ಸಲ್ಲಿಸಿದರು.
ಕಾರಾಗೃಹದ ಇಲಾಖೆಯ ಮಾಹಾ ನಿರ್ದೇಶಕರಾದ ಅಲೋಕ್ ಮೋಹನ್ ಅವರ ಸೂಚನೆಯಂತೆ ಕಾರಗೃಹದ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್ ಕಾನ್ಸಂಟ್ರೇಟರ್ ಒದಗಿಸುವುದಾಗಿ ಮಲ್ಟಿಪ್ಲಕ್ಸ್ ಸಂಸ್ಥ ತಿಳಿಸಿದೆ.
ಈ ಸಂದರ್ಭದಲ್ಲಿ ಕಾರಾಗೃಹ ಆರೋಗ್ಯ ಕೇಂದ್ರದ ಮುಖ್ಯ ಆರೋಗ್ಯಾಧಿಕಾರಿ ಡಾ. ಉಮಾ ಅಧಿಕ್ಷಕರಾದ ಶ್ರೀಮತಿ ತಾ, ವೈದ್ಯಾಧಿಕಾರಿ ಡಾ. ಸಂತೋಷ್, ಡಾ. ಪ್ರಮೀಳ, ಸಹಾಯಕ ಅಧೀಕ್ಷಕರಾದ ಪರಮೇಶ್, ಮಹಾದೇವನಾಯಕ್, ಶ್ರೀಶೈಲ ಮೇಟಿ ಉಪಸ್ಥಿತರಿದ್ದರ.