ನವದೆಹಲಿ,ನ. 22 : ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂರನ್ನು ಪ್ರಶ್ನಿಸಲು ಜಾರಿ ನಿರ್ದೇಶನಾಲಯಕ್ಕೆ ನ.22 ಮತ್ತು 23ರಂದು ಅನುಮತಿ ನೀಡಲಾಗಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಐಎನ್ಎಕ್ಸ್ ಮಾಧ್ಯಮ ಲಂಚ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂರನ್ನು ಪ್ರಶ್ನಿಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಲಾಗಿದ್ದು, ಗುರುವಾರ ವಿಶೇಷ ಕೋರ್ಟ್ ನ್ಯಾಯಾಧೀಶ ಅಜಯಕುಮಾರ್ ಕುಹರ್ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ನ ಹಿರಿಯ ನಾಯಕ ನ.27ರವರೆಗೆ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಕಸ್ಟಡಿಯಲ್ಲಿ ಇರಲಿದ್ದಾರೆ. ಆ.21ರಂದು ಸಿಬಿಐ ಚಿದು ಅವರನ್ನು ಬಂಧಿಸಿತ್ತು. ಆ.16ರಂದು ಇ.ಡಿ ಇದೇ ಪ್ರಕರಣದಲ್ಲಿ ದಸ್ತಗಿರಿ ಮಾಡಿತ್ತು.