ಪ್ರೀತಿ ನಿರಾಕರಿಸಿದಕ್ಕೆ ಪಾಗಲ್‌ ಪ್ರೇಮಿಯ ಹುಚ್ಚಾಟ!

ಪ್ರೀತಿ ನಿರಾಕರಿಸಿದಕ್ಕೆ ಪಾಗಲ್‌ ಪ್ರೇಮಿಯ ಹುಚ್ಚಾಟ!

ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಅಪ್ರಾಪ್ತೆಯ ಮೇಲೆ ಬಾಲಕ ಚಾಕು ಇರಿದಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಪ್ರೀತಿ ಮಾಡಲು ನಿರಾಕರಿಸಿದಳು ಎಂಬ ಕಾರಣಕ್ಕೆ ಬಾಲಕ  ಹುಡುಗಿಯ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ್ದಾನೆ.  ಕಲ್ಬುರ್ಗಿಯಲ್ಲಿ ದಾರುಣ  ಘಟನೆ ನಡೆದಿದ್ದು.  ಬಸ್ ಅಡ್ಡಗಟ್ಟಿ ದುಷ್ಕರ್ಮಿಗಳು ಅಪ್ರಾಪ್ತ ಹುಡುಗಿಯ ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.

ಕಲ್ಬುರ್ಗಿ ಜಿಲ್ಲೆಯ ಅಟ್ಟೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿ ಬೆಳಮಗಿ ಗ್ರಾಮದಿಂದ ವಿಕೆ ಸಲಕರದ ಗ್ರಾಮಕ್ಕೆ ಬಸ್ ನಲ್ಲಿ ಬರುತ್ತಿದ್ದಳು. ಈ ವೇಳೆ ಬಸ್ ಅಡ್ಡಗಟ್ಟಿದ ಯುವಕ ಗುಂಪು ಬಾಲಕಿಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಕಲ್ಬುರ್ಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ನರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಹತ್ತನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಗೆ ಒಂಬತ್ತನೇ  ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದು, ಪ್ರೀತಿ ಮಾಡಲು ನಿರಾಕರಿಸಿದ್ದೇ ಕಾರಣ ಎಂದು ತಿಳಿದುಬಂದಿದೆ.

ತನಗಿಂತ ಒಂದು ಕ್ಲಾಸ್ ಮುಂದಿರುವ ಹುಡುಗಿಯನ್ನು ಬಾಲಕ ಲವ್ ಮಾಡಿದ್ದು. ಪ್ರೀತಿ ನಿವೇದನೆ ಮಾಡಿಕೊಂಡಾಗ ಲವ್ ಗಿವ್ ಬೇಡ ಎಂದಿದ್ದಳು. ಇದೇ ಕಾರಣಕ್ಕೆ ಕೋಪಗೊಂಡ ಬಾಲಕ ಬಾಲಕಿಯನ್ನು ಬಸ್ ನಿಂದ ಕೆಳಗಿಳಿಸಿ ಕತ್ತು ಕೊಯ್ದಿದ್ದಾನೆ. ಸದ್ಯ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಲಾಸ್ ರೂಮ್ ನಿಂದ ಪೊಲೀಸರು ಬಾಲಕನನ್ನು ವಿಚಾರಣೆಗೆ ಕರೆದೊಯ್ದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos