ಪಾಗಲ್ ಪ್ರೇಮಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಪಾಗಲ್ ಪ್ರೇಮಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಮಂಗಳೂರು, ಜೂ. 29: ಪ್ರೀತಿ ನಿರಾಕರಿಸಿದ ಕೋಪಕ್ಕೆ ಯುವತಿಗೆ ಚೂರಿ ಇರಿದು ಯುವಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಹೊರವಲಯದ ಕುಂಪಲ ನಡೆದಿದೆ. ಬಳಿಕ ಯಾರೋ ಸ್ಥಳದಲ್ಲಿದ್ದವರು ಅಂಬ್ಯುಲೆನ್ಸ್ ಗೆ ಕರೆ ಮಾಡಿ ಇಬ್ಬರನ್ನು ಕೂಡಲೇ ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ . ತನ್ನ ಪ್ರೇಯಸಿಯ ಕೊಲೆ ಯತ್ನಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವೀಸ್ಟ್ ಸಿಕ್ಕಿದ್ದು, ಎರಡು ದಿನಗಳಿಂದ ಯುವತಿಯ ಕೊಲೆಗೆ ಸಂಚು ರೂಪಿಸಿ, ಗಾಂಜಾ ಸೇವಿಸಿ ಆರೋಪಿ ಯುವಕ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

ಎಂಬಿಎ ವಿದ್ಯಾರ್ಥಿಯಾಗಿರುವ ಯುವತಿಯನ್ನು ಪ್ರೀತಿಸುತ್ತಿದ್ದ ಆರೋಪಿ ಸುಶಾಂತ್ 50 ಸಾವಿರ ರೂ. ಖರ್ಚು ಮಾಡಿ ಯುವತಿಯ ಹುಟ್ಟುಹಬ್ಬವನ್ನು ಆಚರಿಸಿದ್ದ. ಬಳಿಕ ಸುಶಾಂತ್ ವಿರುದ್ಧ ಯುವತಿ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

ತನ್ನ ಪ್ರೀತಿಯನ್ನು ನಿರಾಕರಿಸಿದಕ್ಕೆ ಕೋಪಗೊಂಡ ಆರೋಪಿ ಗಾಂಜಾ ಸೇವಿಸಿ ಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಸುಮಾರು 12 ಬಾರಿ ಯುವತಿಗೆ ಚಾಕುವಿನಿಂದ ಇರಿದಿದ್ದಾನೆ. ಯುವತಿಯ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

 

 

ಫ್ರೆಶ್ ನ್ಯೂಸ್

Latest Posts

Featured Videos