ತಾಜಾ ಸುದ್ದಿಗಳು

  • ಭಾನು ಮುಷ್ತಾಕ್ ಗೆ ಭೂಕರ್ ಪ್ರಶಸ್ತಿ

    ಬೆಂಗಳೂರು: ಲೇಖಕಿ, ಪತ್ರಕರ್ತೆ, ಕತೆಗಾರ್ತಿ ಭಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ ಲಭಿಸಿರುವುದು ಅವರ ಕತೆಗಳಲ್ಲಿ ಬೆಸೆದಿರುವ ಭಾರತೀಯತೆಯ ಬೆಸುಗೆಗೆ ಸಿಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು (ಬುಧವಾರ ಮೇ 21) ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಭಾನು ಮುಷ್ತಾಕ್ ಅವರು ತಮ್ಮ ಲೇಖನ, ಭಾಷಣ ಮತ್ತು ಕತೆಗಳಲ್ಲಿ ನಮ್ಮ‌ ನೆಲದ ಮೂಲ ಸತ್ವ ಮತ್ತು

    READ MORE
  • ಸುಳ್ಳು ವಿಚಾರಗಳ ಆಧರಿಸಿಯೇ ಬಿಜೆಪಿ ಹೋರಾಟ

    ಮೈಸೂರು: ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದ ಜನತೆಗೆ ದಸರೆಯ ಶುಭ ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯುವ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ , ಅಭಿಮಾನಿಗಳೂ ಇರುತ್ತಾರೆ.

    READ MORE
  • ಮತ್ತೆ ತೆರಿಗೆ ಅನ್ಯಾಯ; ಕನ್ನಡಿಗರನ್ನು ಕೆಣಕುತ್ತಿರುವ ಕೇಂದ್ರ ಸರಕಾರ: ಡಿ.ಕೆ.ಸುರೇಶ್ ಆಕ್ರೋಶ

    ಬೆಂಗಳೂರು: “ಪದೇ, ಪದೇ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಮೋಸವಾಗುತ್ತಿದೆ. ಕನ್ನಡಿಗರು ಹಾಗೂ ದಕ್ಷಿಣ ಭಾರತೀಯರ ಮನಸ್ಸನ್ನು ಕೇಂದ್ರ ಸರ್ಕಾರ ಕೆಣಕುತ್ತಿದೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದರು. ರಾಜ್ಯಗಳಿಗೆ ತೆರಿಗೆ ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ ಗುರುವಾರ ಬಿಡುಗಡೆ ಮಾಡಿದ ಪಟ್ಟಿಯ ಬಗ್ಗೆ ಮಾಧ್ಯಮದವರು ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಕೇಳಿದಾಗ ಸುರೇಶ್ ಅವರು ಹೀಗೆ ಉತ್ತರಿಸಿದರು. “ಕನ್ನಡಿಗರಿಗೆ ಆಗುತ್ತಿರುವ ಮೋಸವನ್ನು ಬಹಳ ದುಃಖದಿಂದ ಹೇಳುತ್ತಿದ್ದೇನೆ. ದೇಶದಲ್ಲಿಯೇ ಅತ್ಯಂತ ಹೆಚ್ಚು ತೆರಿಗೆ

    READ MORE
  • ಸ್ವಚ್ಛ ಭಾರತ ದಿನಾಚರಣೆ

    ಬೆಂಗಳೂರು: ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಆಂದೋಲನ’ ಹಮ್ಮಿಕೊಳ್ಳಲಾಗಿದ್ದು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛ ಭಾರತ ದಿನಾಚರಣೆಗೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಸವನ್ನು ಸ್ವಚ್ಚಗೊಳಿಸಿ ಸಸಿ ನೆಡುವ  ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್

    READ MORE
  • GT ವಿರುದ್ದ ಮೊದಲ ಸೋಲು ಕಂಡ RR

    ಬೆಂಗಳೂರು: ನಿನ್ನೆ ನಡೆದ ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 24ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಗುಜರಾತ್ ಟೈಟನ್ಸ್ ತಂಡವು ಕೊನೆಯ ಎಸೆತದ ರೋಚಕ ಗೆಲುವು ಸಾಧಿಸಿತು. ಈ ಮೂಲಕ ಐಪಿಎಲ್ 2024ರಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಸೋಲು ಅನುಭವಿಸಿತು. ಇನ್ನು ರಾಜಸ್ಥಾನ್ ಕೋಟೆ ಭೇದಿಸಿದ ಗುಜರಾತ್ ಟೈಟನ್ಸ್ ತಂಡ ಪಂದ್ಯಾವಳಿಯಲ್ಲಿ ಮೂರನೇ ಗೆಲುವು ಸಾಧಿಸಿತು. ಇನ್ನು ಟಾಸ್ ಸೋತು ಮೊದಲು ಬ್ಯಾಟಿಂಗ್

    READ MORE
  • ಹ್ಯಾಟ್ರಿಕ್ ಸೋಲಿನ ಬಳಿಕ ಮೊದಲ ಗೆಲುವು ಕಂಡ ಮುಂಬೈ

    ಬೆಂಗಳೂರು: ನಿನ್ನೆ ನಡೆದ ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 29 ರನ್‌ಗಳ ಗೆಲುವಿನ ನಗೆ ಬೀರಿದೆ. ಗಮನಾರ್ಹವಾಗಿ, ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ರಸಕ್ತ ಋತುವಿನಲ್ಲಿ ಮೂರು ಸತತ ಪಂದ್ಯಗಳ ಸೋಲಿನ ನಂತರ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿದೆ. ಈ ಮೂಲಕ ಅಂಕಪಟ್ಟಿ ಅಮೂಲ್ಯ 2 ಅಂಕಗಳನ್ನು ಕಲೆಹಾಕಿದೆ. ಇನ್ನು ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್

    READ MORE
  • SRH ಅಬ್ಬರಕ್ಕೆ ಮಣಿದ CSK

    ಬೆಂಗಳೂರು: ನಿನ್ನೆ ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 18ನೇ ರೋಚಕ ಪಂದ್ಯದಲ್ಲಿ ಅತಿಥೇಯ ಸನ್ ರೈಸರ್ಸ್ ಹೈದರಾಬಾದ್ ತಂಡವು ಪ್ರವಾಸಿ ಚೆನ್ನೈ ಸೂಪರ್ ಕಿಂಗ್ಸ್  ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿದೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಕೊನೆಯ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಇನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ ಕಳೆದ ಪಂದ್ಯದ ಸೋಲಿನ ನಂತರ ಗೆಲುವಿನ ಟ್ರ್ಯಾಕ್‌ಗೆ ಮರಳಿತು.

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು