ತಾಜಾ ಸುದ್ದಿಗಳು

  • ಸುಳ್ಳು ವಿಚಾರಗಳ ಆಧರಿಸಿಯೇ ಬಿಜೆಪಿ ಹೋರಾಟ

    ಮೈಸೂರು: ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದ ಜನತೆಗೆ ದಸರೆಯ ಶುಭ ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯುವ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ , ಅಭಿಮಾನಿಗಳೂ ಇರುತ್ತಾರೆ.

    READ MORE
  • ಮತ್ತೆ ತೆರಿಗೆ ಅನ್ಯಾಯ; ಕನ್ನಡಿಗರನ್ನು ಕೆಣಕುತ್ತಿರುವ ಕೇಂದ್ರ ಸರಕಾರ: ಡಿ.ಕೆ.ಸುರೇಶ್ ಆಕ್ರೋಶ

    ಬೆಂಗಳೂರು: “ಪದೇ, ಪದೇ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಮೋಸವಾಗುತ್ತಿದೆ. ಕನ್ನಡಿಗರು ಹಾಗೂ ದಕ್ಷಿಣ ಭಾರತೀಯರ ಮನಸ್ಸನ್ನು ಕೇಂದ್ರ ಸರ್ಕಾರ ಕೆಣಕುತ್ತಿದೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದರು. ರಾಜ್ಯಗಳಿಗೆ ತೆರಿಗೆ ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ ಗುರುವಾರ ಬಿಡುಗಡೆ ಮಾಡಿದ ಪಟ್ಟಿಯ ಬಗ್ಗೆ ಮಾಧ್ಯಮದವರು ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಕೇಳಿದಾಗ ಸುರೇಶ್ ಅವರು ಹೀಗೆ ಉತ್ತರಿಸಿದರು. “ಕನ್ನಡಿಗರಿಗೆ ಆಗುತ್ತಿರುವ ಮೋಸವನ್ನು ಬಹಳ ದುಃಖದಿಂದ ಹೇಳುತ್ತಿದ್ದೇನೆ. ದೇಶದಲ್ಲಿಯೇ ಅತ್ಯಂತ ಹೆಚ್ಚು ತೆರಿಗೆ

    READ MORE
  • ಸ್ವಚ್ಛ ಭಾರತ ದಿನಾಚರಣೆ

    ಬೆಂಗಳೂರು: ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಆಂದೋಲನ’ ಹಮ್ಮಿಕೊಳ್ಳಲಾಗಿದ್ದು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛ ಭಾರತ ದಿನಾಚರಣೆಗೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಸವನ್ನು ಸ್ವಚ್ಚಗೊಳಿಸಿ ಸಸಿ ನೆಡುವ  ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್

    READ MORE
  • ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ ಚನ್ನಮ್ಮ: ಸಿಎಂ

    ಬೆಂಗಳೂರು: ಸ್ವಾಭಿಮಾನ-ನಾಡಭಕ್ತಿ, ದೇಶಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು. ವಿಧಾನಸೌಧ ಮುಂದಿನ ಮೆಟ್ಟಿಲುಗಳ ಬಳಿ “ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರು ತಲುಪಲಿದೆ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಇವರು ಎಂದರು. ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ

    READ MORE
  • ಲಕ್ಸೆಂಬರ್ಗ್‌: ಸಾರ್ವಜನಿಕ ಸಾರಿಗೆ ಸಂಪೂರ್ಣ ಉಚಿತ!

    ಲಕ್ಸೆಂಬರ್ಗ್‌ ಸಿಟಿ: ಯುರೋಪ್‌ನ ಚಿಕ್ಕ ದೇಶವಾದ ಲಕ್ಸೆಂಬರ್ಗ್‌, ತನ್ನಲ್ಲಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ನಾಗರಿಕರಿಗೆ ಉಚಿತವಾಗಿ ನೀಡುವುದಾಗಿ ಘೋಷಿಸಿದೆ. 2019ರ ಆರಂಭದಿಂದ ಇದು ಜಾರಿಗೆ ಬರಲಿದೆ. ಈ ಮೂಲಕ, ಸಾರಿಗೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಉಚಿತವಾಗಿಸಿದ ವಿಶ್ವದ ಮೊಟ್ಟ ಮೊದಲ ದೇಶವೆಂಬ ಹೆಗ್ಗಳಿಕೆ ಲಕ್ಸೆಂಬರ್ಗ್‌ ಪಾಲಾಗಿದೆ. ಬೆಂಗಳೂರಿಗಿಂತ ಸುಮಾರು ಮೂರು ಪಟ್ಟು ದೊಡ್ಡದಿರುವ ಈ ಪುಟಾಣಿ ದೇಶದಲ್ಲಿ ಸಾರಿಗೆ ದರ ಅಂಥಾ ದುಬಾರಿಯೇನಲ್ಲ. ರೈಲಿನ ಪ್ರಥಮ ದರ್ಜೆ ಎ.ಸಿ. ಕೋಚ್‌ನ ಪ್ರಯಾಣದ ದರ ಗರಿಷ್ಠ 3 ಯೂರೋ (ಅಂದಾಜು

    READ MORE
  • ಮಿಕಾ ಸಿಂಗ್‌ ಬಿಡುಗಡೆ; ಇಂದು UAE ಕೋರ್ಟಿಗೆ : ಭಾರತೀಯ ರಾಯಭಾರಿ

    ಅಬುಧಾಬಿ : ಲೈಂಗಿಕ ದುರ್ವರ್ತನೆ ತೋರಿದ ಕಾರಣಕ್ಕೆ ಬಂಧಿಸಲ್ಪಟ್ಟಿದ್ದ ಭಾರತೀಯ ಪಾಪ್‌ ಸ್ಟಾರ್‌ ಮಿಕಾ ಸಿಂಗ್‌ ಅವರನ್ನು ಬಿಡುಗಡೆಗೊಳಿಸಲಾಗಿದೆ ಎಂದು ಯುಎಇ ಭಾರತೀಯ ರಾಯಭಾರಿ ನವದೀಪ್‌ ಸಿಂಗ್‌ ಸೂರಿ ತಿಳಿಸಿದ್ದಾರೆ. 17 ವರ್ಷ ಪ್ರಾಯದ ಬ್ರಝಿಲ್‌ನ ಅಪ್ರಾಪ್ತ ವಯಸ್ಸಿನ ಬಾಲಕಿಯ ಆಕ್ಷೇಪಾರ್ಹ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್‌ ಮಾಡಿದ್ದ ಮಿಕಾ ಸಿಂಗ್‌ ವಿರುದ್ಧ ಬಾಲಕಿಯು ನೀಡಿದ್ದ ದೂರಿನ ಮೇರೆಗೆ ಆತನನ್ನು ಬಂಧಿಸಲಾಗಿತ್ತು. ಮಿಕಾ ಸಿಂಗ್‌ ರನ್ನು ಇಂದು ಶುಕ್ರವಾರ ಸ್ಥಳೀಯ ಕೋರ್ಟಿಗೆ ಹಾಜರುಪಡಿಸಲಾಗುವುದು ಎಂದು ನವದೀಪ್‌ ಸಿಂಗ್‌

    READ MORE
  • ಭಾರತ-ಪಾಕ್‌ ವ್ಯಾಪಾರ ವಹಿವಾಟು ಪ್ರಮಾಣ ಅತ್ಯಲ್ಪ: ವಿಶ್ವಬ್ಯಾಂಕ್‌

    ಇಸ್ಲಾಮಾಬಾದ್‌ : ‘ಭಾರತ ಮತ್ತು ಪಾಕಿಸ್ಥಾನದ ನಡುವಿನ ವ್ಯಾಪಾರ ವಹಿವಾಟು ಪ್ರಕೃತ ಎರಡು ಶತಕೋಟಿ ಡಾಲರ್‌ಗಿಂತ ಸ್ವಲ್ಪವೇ ಹೆಚ್ಚಿದೆ; ಆದರೆ ಇದು ಸಹಜ ಸಾಧ್ಯತೆಯ ಪ್ರಮಾಣಕ್ಕಿಂತ ಎಷ್ಟೋ ಕಡಿಮೆ ಇದೆ. ಅಂತೆಯೇ ಇದು 37 ಶತಕೋಟಿ ಡಾಲರ್‌ ಮಟ್ಟದ ವರೆಗೂ ಹೋಗಬೇಕಾಗಿದೆ’ ಎಂದು ವಿಶ್ವ ಬ್ಯಾಂಕ್‌ ತನ್ನ ವರದಿಯಲ್ಲಿ ಹೇಳಿದೆ. ‘ಆದರೆ ಇದನ್ನು ಸಾಧಿಸ ಬೇಕಾದರೆ ಉಭಯ ದೇಶಗಳು ತಮ್ಮ ನಡುವಿನ ಕೃತಕ ಅಡೆತಡೆಗಳನ್ನು ತೊಡೆದು ಹಾಕಬೇಕಿದೆ; ಸಂಪರ್ಕ ಕೊರತೆಯನ್ನು ನಿವಾರಿಸಿಕೊಳ್ಳಬೇಕಿದೆ; ವಿಶ್ವಾಸದ ಕೊರತೆಯನ್ನು ತುಂಬಬೇಕಿದೆ ಮತ್ತು

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು