ಬೃಹತ್ ಗಾತ್ರ ಮೊಸಳೆ ಪತ್ತೆ..!
- ರಾಯಚೂರು
- December 6, 2019
ರಾಯಚೂರು, ಡಿ. 6 : ನಾರಾಯಣಪುರದ ಬಸವಸಾಗರ ಜಲಾಶಯದ ಹಿನ್ನೀರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷವಾಗಿದೆ. ಜಲಾಶಯದ ಹಿನ್ನೀರಿನಲ್ಲಿರುವ ನವಲಿಯ ಜಡೇಲಿಂಗೇಶ್ವರ ದೇವಸ್ಥಾನದ ಬಳಿ ಮೊಸಳೆ ಪ್ರತ್ಯಕ್ಷವಾಗಿ ಭಕ್ತರಲ್ಲಿ ಆತಂಕ ಮೂಡಿತು. ನವಲಿ ಗ್ರಾಮವು ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗಿದೆ. ಹಲವು ದಿನಗಳಿಂದ ಮೊಸಳೆ ಹಿನ್ನೀರಿನಲ್ಲಿ ಕಾಣಿಸಿಕೊಳ್ಳುತ್ತಿದೆ. ದೇವಾಲಯಕ್ಕೆ ಪ್ರತಿ ದಿನ ಹಲವು ಮಂದಿ ಭಕ್ತರು ಆಗಮಿಸುತ್ತಾರೆ. ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿರುವುದರಿಂದ ಭೀತಿ ಎದುರಾಗಿದೆ.
READ MORE