ಉಡುಪಿ ಜಿಲ್ಲೆಗೆ ನಾಳೆ ಶಾ

ಉಡುಪಿ ಜಿಲ್ಲೆಗೆ ನಾಳೆ  ಶಾ

ಬೆಂಗಳೂರು,ಡಿ. 20 : ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಅನಾರೋಗ್ಯಕ್ಕೀಡಾಗಿದ್ದು, ಶ್ರೀಪಾದರ ಆರೋಗ್ಯವನ್ನು ಪ್ರಧಾನಿ ಮೋದಿ ವಿಚಾರಿಸಿದ್ದಾರೆ. ಅಲ್ಲದೆ, ಉಡುಪಿ ಜಿಲ್ಲೆಗೆ ನಾಳೆ ಅಮಿತ್‌ ಶಾ ಭೇಟಿ ನೀಡುವ ಸಾಧ್ಯತೆ ಇದೆ.

ಮಣಿಪಾಲದ ಕಸ್ತೂರ್‌ ಬಾ ಆಸ್ಪತ್ರೆಗೆ ದಾಖಲಾದ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರ ಆರೋಗ್ಯವನ್ನು ಪ್ರಧಾನಿ ಮೋದಿ ಶುಕ್ರವಾರ ವಿಚಾರಿಸಿದ್ದಾರೆ. ಅಲ್ಲದೆ ಪೇಜಾವರ ಮಠದ ಶ್ರೀಗಳು ಶೀಘ್ರ ಗುಣಮುಖರಾಗಲೆಂದು ಮೋದಿ ಹಾರೈಸಿದ್ದಾರೆ. ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲ್ನ ಕೆಎಂಸಿ ಆಸ್ಪತ್ರಗೆ ಇಂದು ಮುಂಜಾನೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ ಬೆಳಗ್ಗೆ 5 ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಿಗೆ ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ರೋಗನಿರೋಧಕ ಔಷಧಿಗಳನ್ನು ನೀಡಲಾಗುತ್ತಿದೆ. ಸದ್ಯ ಅವರ ದೇಹಾರೋಗ್ಯ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆಯನ್ನು ಮುಂದುವರೆಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ. ಶ್ರೀಗಳು ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿಯುತ್ತಿದ್ದಂತೆ ಪುತ್ತಿಗೆ ಶ್ರೀಗಳು ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos