ಬೆಂಗಳೂರು,ಜ. 10 : ಬೆಂಗಳೂರು, ಉಡುಪಿ, ಮುಂಬಯಿ, ದಿಲ್ಲಿ, ಚೆನ್ನೈ, ಹುಬ್ಬಳ್ಳಿ-ಧಾರವಾಡ ಸಹಿತ ನಾಡಿನ 30ಕ್ಕೂ ಹೆಚ್ಚು ಕಡೆಗಳಲ್ಲಿ ಗುರುವಾರ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರ ಆರಾಧನೋತ್ಸವ ನಿಮಿತ್ತ ಅವರ ಸಂಸ್ಮರಣೆ, ಅನ್ನಸಂತರ್ಪಣೆ ನಡೆಯಿತು.
ವಿದ್ಯಾಪೀಠದಲ್ಲಿ ಯತಿಗಳ ಸಮಾವೇಶ
ಸ್ವಾಮೀಜಿಯವರನ್ನು ವೃಂದಾವನ ಮಾಡಿದ ಸ್ಥಳ ಬೆಂಗಳೂರು ಪೂರ್ಣ ಪ್ರಜ್ಞ ವಿದ್ಯಾಪೀಠದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ನೇತೃತ್ವದಲ್ಲಿ ಯತಿಗಳ ಸಮಾವೇಶ ನಡೆಯಿತು. ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥರು, ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥರು, ಭಂಡಾರಕೇರಿ ಮಠದ ಶ್ರೀ ವಿದ್ಯೆಶತೀರ್ಥರು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥರು, ಸೋಸಲೆ ಮಠದ ಶ್ರೀ ವಿದ್ಯಾಶ್ರೀಶತೀರ್ಥರು ಹಾಗೂ ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರ ಶ್ರೀಪಾದರು ಸೇರಿದಂತೆ ಹಲವು ಯತಿಗಳ ಪಾಲ್ಗೊಂಡಿದ್ದರು.