ಪಾಕ್ ಗುರುದ್ವಾರ ಮೇಲೆ ದಾಳಿ

ಪಾಕ್ ಗುರುದ್ವಾರ ಮೇಲೆ ದಾಳಿ

ನವದೆಹಲಿ, ಜ.5 : ಪಾಕಿಸ್ತಾನದ ನಂಕಾನಾ ಸಾಹಿಬ್ ಗುರುದ್ವಾರದ ಮೇಲೆ ನಡೆದ ದಾಳಿಯನ್ನು ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇದು ಅನಗತ್ಯ ಮತ್ತು ಅಪ್ರಚೋದಿತ ದಾಳಿ ಎಂದು ಹೇಳಿದ್ದಾರೆ.
ಸಿಖ್ ಯಾತ್ರಾರ್ಥಿಗಳ ಸುರಕ್ಷತೆಯ ಬಗ್ಗೆ ಬೇಸರ ಮತ್ತು ಕಳವಳ ವ್ಯಕ್ತಪಡಿಸಿರುವ ಸೋನಿಯಾ ಗಾಂಧಿ, ಯಾತ್ರಾರ್ಥಿಗಳಿಗೆ ಭದ್ರತೆ ಮತ್ತು ಭವಿಷ್ಯದಲ್ಲಿ ನಡೆಯಬಹುದಾದ ಯಾವುದೇ ದಾಳಿಯನ್ನು ತಡೆಗಟ್ಟಲು ಪಾಕಿಸ್ತಾನ ಸರ್ಕಾರ ದೇವಾಲಯಕ್ಕೆ ಬಿಗಿ ಭದ್ರತೆಯನ್ನು ನೀಡಬೇಕು.
ಪಾಕಿಸ್ತಾನದ ಅಧಿಕಾರಿಗಳ ಜತೆಗೆ ಕೇಂದ್ರ ಸರ್ಕಾರ ಈ ಕೂಡಲೇ ಸಂಪರ್ಕ ಸಾಧಿಸಿ ಭದ್ರತೆಯನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ದಾಳಿಕೋರರ ವಿರುದ್ಧ ಕೂಡಲೇ ಕೇಸ್ ದಾಖಲಿಸಿ, ಅವರನ್ನು ಬಂಸಬೇಕು ಎಂದು ಭಾರತ ಸರ್ಕಾರ ಇಮ್ರಾನ್ ಖಾನ್ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದ ಸೋನಿಯಾ ಗಾಂಧಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos