ನವದೆಹಲಿ, ಸೆ. 5 : ಜಮ್ಮು ಮತ್ತು ಕಾಶ್ಮೀರದಲ್ಲಿನ ಕೃತ್ಯಗಳನ್ನು ನಿಲ್ಲಿಸದೇ ಹೋದಲ್ಲಿ ಪಾಕ್ ಜನ್ಮಜನ್ಮದಲ್ಲೂ ನೆನಸಿಕೊಳ್ಳುವಂತಹ ಏಟು ನೀಡುತ್ತೇವೆ. ಉದ್ಘಟತನ ಮುಂದುವರೆದರೆ ಆ ದೇಶವನ್ನೇ ಬಲಿ ಹಾಕುವಂತಹ ಕೆಲಸ ಮಾಡಬೇಕಾಗುತ್ತದೆ ಎಂದು ಸೇನೆ ಎಚ್ಚರಿಕೆ ನೀಡಿದೆ.
ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ ಪ್ರಚೋದನಾಕಾರಿ ದಾಳಿ ನಡೆಸುವ ಜತೆಗೆ, ಅಣ್ವಸ್ತ್ರ ಪ್ರಯೋಗದ ಕುರಿತು ಪ್ರಸ್ತಾಪಿಸುವ ಮೂಲಕ ಭಾರತವನ್ನು ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಖಡಕ್ ಎಚ್ಚರಿಕೆ ರವಾನಿಸಿದೆ.