ಪಕ್ಷ ಬೆಳೆಯುವ ಜತೆಗೆ ಪರಿಸರವೂ ಉಳಿಯಬೇಕು: ಪ್ರಧಾನಿ

ಪಕ್ಷ ಬೆಳೆಯುವ ಜತೆಗೆ ಪರಿಸರವೂ ಉಳಿಯಬೇಕು: ಪ್ರಧಾನಿ

ನವದೆಹಲಿ, ಜು. 6 : ಇಂದು ಪ್ರಧಾನಿ ನರೇಂದ್ರ ಮೋದಿ ತಾವು ಪ್ರತಿನಿಧಿಸುವ ಸಂಸದೀಯ ಕ್ಷೇತ್ರವಾದ ವಾರಾಣಸಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಅಮಿತ್ ಶಾ ಮತ್ತು ಪಿಯೂಷ್ ಗೋಯಲ್ ಕ್ರಮವಾಗಿ ತೆಲಂಗಾಣ ಮತ್ತು ಗೋವಾದಲ್ಲಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.

ವಾರಾಣಸಿಯಲ್ಲಿ ಸಸಿಗಳನ್ನು ನೆಡುವ ಮೂಲಕ ಪ್ರಧಾನಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಪಕ್ಷ ಬೆಳೆಯುವ ಜತೆಗೆ ಪರಿಸರವೂ ಉಳಿಯಬೇಕು ಎನ್ನುವ ಪ್ರಧಾನಿ, ದೇಶದ ಪ್ರತಿ ಮತಗಟ್ಟೆ ಪ್ರದೇಶದಲ್ಲಿ ಕನಿಷ್ಠ ಐದು ಸಸಿಗಳನ್ನು ನೆಡುವ ಮೂಲಕ ಸದಸ್ಯತ್ವ ಅಭಿಯಾನ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡರಿಗೆ ಕರೆ ನೀಡಿದ್ದಾರೆ.

ಇಂದು ಜನಸಂಘದ ಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮದಿನವಾಗಿದ್ದು, ಈ ವಿಶೇಷ ಸಂದರ್ಭದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ಈ ಅಭಿಯಾನವನ್ನು ಅವರು ‘ ಪಂಚವಟಿ’ ಎಂದು ಹೆಸರಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos