ಇಂದೋರ್, ಜೂ. 27 : ಮಹಾನಗರ ಪಾಲಿಕೆ ಅಧಿಕಾರಗಳ ಮೇಲೆ ಬ್ಯಾಟ್ ನಿಂದ ಹಲ್ಲೆ ನಡೆಸಿರುವ ಘಟನೆ ಇಂದೋರ್ ನಲ್ಲಿ ನಡೆದಿದೆ. ಪಕ್ಕಾ ಕ್ರಿಕೆಟ್ ಶಾಟ್ ಹೊಡೆಯುವ ರೀತಿಯಲ್ಲೇ ಕರ್ತವ್ಯ ನಿರತ ಅಧಿಕಾರಿಗಳ ಮೇಲೆ 3 ಕ್ಷೇತ್ರದ ಶಾಸಕ ಆಕಾಶ್ ವರ್ಗೀಯಾ ಕ್ರಿಕೆಟ್ ಬ್ಯಾಟ್ನಿಂದ ಹಲ್ಲೆ ನಡೆಸಿದ್ದಾರೆ. ಮಹಾನಗರ ಪಾಲಿಕೆ ಅಧಿಕಾರಯೊಬ್ಬರು ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ತೆರವುಗೊಳಿಸಲು ಮುಂದಾದ್ದ ಹಿನ್ನಲೆ ಬಿಜೆಪಿಯ ಹಿರಿಯ ನಾಯಕ ವಿಜಯ್ ವರ್ಗೀಯಾ ಅವರ ಪುತ್ರ, ಇಂದೋರ್ 3 ಕ್ಷೇತ್ರದ ಶಾಸಕ ಆಕಾಶ್ ವರ್ಗೀಯಾ ಕ್ರಿಕೆಟ್ ಬ್ಯಾಟ್ನಿಂದ ಪಕ್ಕ ಸಿಕ್ಸರ್ ಹೊಡೆದಂಗೆ ಅಧಿಕಾರಿಗಳ ಮೇಲೆ ಶಾಸಕನಿಂದ ಹಲ್ಲೆ ನಡೆದಿದೆ.
ಬಳಿಕ ಘಟನೆ ಕುರಿತು ದೇಶವ್ಯಾಪಿ ಖಂಡನೆ ವ್ಯಕ್ತವಾದ ಬೆನ್ನಲ್ಲೇ ಆಕಾಶ್ ವರ್ಗೀಯಾ ಮತ್ತು ಇತರೆ 10 ಜನರ ಮೇಲೆ ಪೊಲೀಸರು ಕೇಸು ದಾಖಲಿಸಿ ಬಂಧಿಸಿದ್ದಾರೆ. ಬಳಿಕ ಬಂಧಿತರನ್ನು ನ್ಯಾಯಾಲಯ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗಳಿಗೆ ಜಾಮೀನು ನಿರಾಕರಿಸಿ, ಪೊಲೀಸರ ವಶಕ್ಕೆ ಒಪ್ಪಿಸಿದೆ.