ಬೆಂಗಳೂರು, ಅ. 2 : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯ ಛತ್ತೀಸ್ ಘಡ್ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ತಂಡ ಭರ್ಜರಿ ಮೊತ್ತ ಕಲೆಹಾಕಿದೆ. ನಾಯಕ ಮನೀಶ್ ಪಾಂಡೆ ಆಕರ್ಷಕ ಶತಕ, ಕೆ ಎಲ್ ರಾಹುಲ್ ಅರ್ಧಶತಕದ ನೆರವಿನಿಂದ ರಾಜ್ಯ ತಂಡ ಎದುರಾಳಿಗೆ ಗೆಲ್ಲಲು 286 ರನ್ಗಳ ಟಾರ್ಗೆಟ್ ನೀಡಿದೆ. ಟಾಸ್ ಸೋತು ಬ್ಯಾಟಿಂಗ್ಗೆ ಉಳಿದ ಕರ್ನಾಟಕಕ್ಕೆ ಉತ್ತಮ ಆರಂಭ ಸಿಗಲಿಲ್ಲ. ದೇವದತ್ ಪಡಿಕ್ಕಲ್(8) ಹಾಗೂ ಕರುಣ್ ನಾಯರ್(1) ಬೇಗನೆ ಪೆವಿಲಿಯನ್ ಸೇರಿಕೊಂಡರು. ಈ ಸಂದರ್ಭ ತಂಡಕ್ಕೆ ಆಸರೆಯಾಗಿದ್ದು ಕೆ ಎಲ್ ರಾಹುಲ್ ಹಾಗೂ ನಾಯಕ ಮನೀಶ್ ಪಾಂಡೆ. ಆರಂಭಿಕ ಆಘಾತದಿಂದ ತಂಡವನ್ನು ಪಾರು ಮಾಡಿದ ಈ ಜೋಡಿ ಅತ್ಯುತ್ತಮ ಜೊತೆಯಾಟ ಪ್ರದರ್ಶಿಸಿತು. ರಾಹುಲ್ ಎಂದಿನಂತೆ ಎಚ್ಚರಿಕೆಯ ಬ್ಯಾಟಿಂಗ್ಗೆ ಮುಂದಾದರೆ, ಪಾಂಡೆ ಬಿರುಸಿನ ಆಟದ ಮೊರೆಹೋದರು.