ಬೆಂಗಳೂರು: ಹಿರಿಯ ಗಜಲ್ ಗಾಯಕ ಪಂಕಜ್ ಉದಾಸ್ ಅವರು ಇಹ ಲೋಕ ತ್ಯಜಿಸಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಪಂಕಜ್ ಉದಾಸ್ ನಿಧನದ ಸುದ್ದಿಯನ್ನು ಅವರ ಕುಟುಂಬ ದೃಢಪಡಿಸಿದೆ. ಈ ಬಗ್ಗೆ ಗಾಯಕನ ಕುಟುಂಬ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
ದೀರ್ಘಕಾಲದ ಅನಾರೋಗ್ಯದಿಂದ ಬಳುತ್ತಿದ್ದ ಪದ್ಮಶ್ರೀ ಪಂಕಜ್ ಉದಾಸ್ ನಿಧನದ ಬಗ್ಗೆ ತುಂಬಾ ಭಾರವಾದ ಹೃದಯದಿಂದ ತಿಳಿಸುತ್ತಿದ್ದೇವೆ ಎಂದು ಅವರ ಕುಟುಂಬ ಟ್ವೀಟ್ ಮೂಲಕ ಹೇಳಿಕೆ ಬಿಡುಗಡೆ ಮಾಡಿದೆ.
ಪಂಕಜ್ ಉಧಾಸ್ ಅವರ ನಿಧನಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಸ್ಪರ್ಶ’ಸಿನಿಮಾದಲ್ಲಿನ ‘ಬರೆಯದ ಮೌನದ ಕವಿತೆ ಹಾಡಾಯಿತು..’, ‘ಚಂದಕಿಂತ ಚಂದ ನೀನೇ ಸುಂದರ..’ ಹಾಡುಗಳು ಪಂಕಜ್ ಉಧಾಸ್ ಅವರ ಕಂಠದಲ್ಲಿ ಮೂಡಿಬಂದಿದ್ದವು. ಕೇಳುಗರ ಫೇವರಿಟ್ ಲಿಸ್ಟ್ನಲ್ಲಿ ಈ ಹಾಡುಗಳು ಈಗಲೂ ಜಾಗ ಪಡೆದುಕೊಂಡಿವೆ. ಪಂಕಜ್ ಉಧಾಸ್ ಅವರ ಅಗಲಿಕೆಗೆ ಕರುನಾಡಿನಲ್ಲಿನ ಅಭಿಮಾನಿಗಳು ಕೂಡ ಕಂಬನಿ ಮಿಡಿಯುತ್ತಿದ್ದಾರೆ.