ಭೀಮಾವರಂ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಪವನ್ ಕಲ್ಯಾಣ್

ಭೀಮಾವರಂ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಪವನ್ ಕಲ್ಯಾಣ್

ಅಮರಾವತಿ, ಮಾ.22, ನ್ಯೂಸ್ ಎಕ್ಸ್ ಪ್ರೆಸ್: ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ರವರು ವಿಧಾನಸಭೆ ಚುನಾವಣೆಯಲ್ಲಿ ಭೀಮಾವರಂ ಕ್ಷೇತ್ರ ಅಲ್ಲದೇ ಗಜುವಾಕಾ ಎಂಬ ಕ್ಷೇತ್ರದಿಂದ ಎರಡು ಕ್ಷೇತ್ರಗಳಲ್ಲಿ ಕಣಕ್ಕಿಳಿಯುತ್ತಿದ್ದಾರೆ.

ನಿನ್ನೆ ಗುರುವಾರ ಅಧಿಕೃತವಾಗಿ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ವಿಶಾಖ ಪಟ್ಟಣಂ ಜಿಲ್ಲೆಯ ಗಜುವಾಕಾ ಹಾಗೂ ಪಶ್ಚಿಮ ಗೋದಾವರಿಯಲ್ಲಿನ ಭೀಮಾವರಂ ಎರಡು ವಿಧಾನಸಭೆ ಕ್ಷೇತ್ರದಿಂದ ತಮ್ಮ ರಾಜಕೀಯ ಜೀವನ ಆರಂಭಿಸಲು ಪವನ್ ಕಲ್ಯಾಣ್ ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಈಗಾಗಲೇ ಲೋಕಸಭೆ ಚುನಾವಣೆಗಾಗಿ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಜತೆ ಮೈತ್ರಿ ಮಾಡಿಕೊಂಡಿದ್ದು,ಆಂಧ್ರಪ್ರದೇಶದ ಒಟ್ಟು 175 ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧಿಸುತ್ತಿದೆ.

ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಜತೆಗೆ 18 ಲೋಕಸಭಾ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡ್ತಾ ಇದೆ. ಈಗಾಗಲೇ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷಕ್ಕೆ ಬೇರೆ ಬೇರೆ ಪಕ್ಷಗಳ ಮುಖಂಡರು ಜನ ಸೇನಾ ಪಕ್ಷಕ್ಕೆ ಬೆಂಬಲ ಸೂಚಿಸಿ ಬಂದಿದ್ದಾರೆ. ಜೊತೆಗೆ ಪವನ್ ಕಲ್ಯಾಣ್ ಹಿರಿಯ ಸಹೋದರ ನಾಗಬಾಬು ಕೂಡ ಪಕ್ಷಕ್ಕೆ ಬಂದಿದ್ದ ಇವರ ಕೂಡ ಚುನಾವಣೆ ಸ್ಪರ್ಧೆ ಮಾಡುವ ಸಾಧ್ಯತೆಗಳಿವೆ.

ಪವನ್ ಕಲ್ಯಾಣ್ ಬಿಎಸ್ಪಿ ಅಲ್ಲದೆ ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಆಂಧ್ರದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಏಕಕಾಲದಲ್ಲಿ ನಡೆಯುತ್ತಿದ್ದು, ಏಪ್ರಿಲ್ 11ರಂದು ಮತದಾನ ನಡೆಯಲಿದೆ.

ಫ್ರೆಶ್ ನ್ಯೂಸ್

Latest Posts

Featured Videos