ಜನ ಸೇವೆಗೆ ಅಧಿಕಾರ ಮುಖ್ಯವಲ್ಲ

ಜನ ಸೇವೆಗೆ ಅಧಿಕಾರ ಮುಖ್ಯವಲ್ಲ

ರಾಯಬಾಗ: ಜನರಿಗೆ ಸೇವೆಯೆ ಮುಖ್ಯ ಹೊರತು ಅಧಿಕಾರ ಮುಖ್ಯವಲ್ಲ ವೆಂದು ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಪಟ್ಟಣದ ಮಹಾವೀರ ಭವನದಲ್ಲಿ ಕಲ್ಲೋಳಿಕರ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಕಿಟ್ ವಿತರಣಾ ಸಮಾರಂಭದಲ್ಲಿ ಕಿಟ್ ವಿತರಿಸಿ ಕಾರ್ಯಕರ್ತರಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದರು.
ಕೊರೋನಾ ವೈರಸ್ ಲಾಕ್‌ಡೌನ್‌ದಿಂದ ಸಂಕಷ್ಟಕ್ಕಿಡಾದ ಬಡವರಿಗೆ, ಕೂಲಿಕಾರ್ಮಿಕರಿಗೆ, ನಿರ್ಗತಿಕರಿಗೆ ಕಲ್ಲೋಳಿಕರ ಪ್ರತಿಷ್ಠಾನದ ವತಿಯಿಂದ ರಾಯಬಾಗ ಹಾಗೂ ಕುಡಚಿ ವಿಧಾನಸಭೆಯ ಕ್ಷೇತ್ರಗಳ ಸುಮಾರು ೮೫ ಹಳ್ಳಿಗಳ ಜನರಿಗೆ ಆಹಾರ ಧಾನ್ಯದ ಕಿಟ್‌ಗಳನ್ನು ನೀಡಿದ ಕಾರ್ಯ ಶ್ಲಾಘನಿಯವಾಗಿದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos