ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಗ್ನಿ ಅವಘಡಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚು ತಾನೇ ಇದೆ ಇದರಿಂದ ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡ ದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ.
ಹೊಸ ಫ್ಯಾಕ್ಟರಿಯಾಗಿದೆ ಸಂಬಳ ಜಾಸ್ತಿ ಸಿಗುತ್ತೆ, ಅಲ್ಲದೆ ಮನೆ ಪಕ್ಕದಲ್ಲೇ ಫ್ಯಾಕ್ಟರಿ ಇದೆ ಅಂತ ಅಂತ ಗಾಯಾಳುಗಳು ಇರ್ಫಾನ್, ಅಪ್ರೋಜ್ ಪಾಷಾ ಒಂದು ವಾರದ ಹಿಂದಷ್ಟೆ ಕೆಲಸಕ್ಕೆ ಸೇರಿದ್ದರು. ನಿನ್ನೆ ರಜೆ ಇದ್ದ ಕಾರಣ, ಇರ್ಫಾನ್ ಪಾಷಾಗೆ ಊಟ ಕೊಡಲು ಅಪ್ರೋಜ್ ಪಾಷಾ, ಅಪ್ರೋಜ್ ಪಾಷಾರ ಮಗ ಮತ್ತು ಅಪ್ರೋಜ್ ಪಾಷಾರ ಅಕ್ಕನ ಮಗ ಕಾರ್ಖಾನೆಗೆ ಹೋಗಿದ್ದರು. ಈ ವೇಳೆ ಕಾರ್ಖಾನೆಯಲ್ಲಿ ಧಿಡೀರನೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೆ ಐವರು ಹೊರಗೆ ಓಡಿ ಬಂದರೂ, ಬೆಂಕಿ ತಗುಲಿತ್ತು. ಗಾಯಾಳುಗಳು ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.