ಪೀಣ್ಯ ದಾಸರಹಳ್ಳಿ, ಅ. 21: ಬೆಂಗಳೂರಿನ ಚಿಕ್ಕಬಾಣಾವರ ರೈಲ್ವೆ ನಿಲ್ದಾಣದಲ್ಲಿ ಪಿಸ್ತೂಲ್ ಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರೈಲ್ವೆ ನಿಲ್ದಾಣ ಸ್ವಚ್ಛಗೊಳಿಸುವಾಗ ಆಟೋ ಪಿಸ್ತೂಲ್ ಪತ್ತೆಯಾಗಿದ್ದು, ಗ್ಯಾಂಗ್ಮನ್ ಮುರಳಿ ಈ ಕುರಿತು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಚಿಕ್ಕಬಾಣಾವರ ಸ್ಟೇಷನ್ ಮಾಸ್ಟರ್ ನವ್ಯ ಸ್ಥಳ ಪರಿಶೀಲನೆ ನಡೆಸಿದಾಗ ಆಟೋ ಪಿಸ್ತೂಲ್ 77355 ಹಾಗೂ 9 ಎಂಎಂನ 9 ಗುಂಡುಗಳು ಪತ್ತೆಯಾಗಿವೆ.
ದುಷ್ಕರ್ಮಿಗಳು ಅಕ್ರಮವಾಗಿ ಪಿಸ್ತೂಲ್ ಸಾಗಿಸಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತಪಾಸಣೆ ನಡೆಸುತ್ತಾರೆ ಎಂಬ ಭಯದಿಂದ ಬಿಟ್ಟು ಹೋಗಿರಬಹುದು ಎಂದು ಊಹಿಸಲಾಗಿದೆ.
ಈ ಸಂಬಂಧ ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆಯುಧ ಕಾಯ್ದೆ ಕಲಂ 25 (ಎ) ಹಾಗೂ ಸಿಆರ್ಪಿಸಿ 102 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪಿಸ್ತೂಲ್ ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರು ವ್ಯಾಪಕ ಬಲೆ ಬೀಸಿದ್ದಾರೆ.