ಬೆಂಗಳೂರು, ಸೆ. 10 : ನಗರದ ಎಲ್ಲಾ ಪೊಲೀಸ್ ಠಾಣೆಗಳು ಸ್ವಚ್ಛವಾಗಿಲ್ಲದಿದ್ದರೇ, ಸಂಬಂಧಿಸಿದ ಪೊಲೀಸ್ ಅಧಿಕಾರಿಗಳನ್ನು ಹೊಣೆ ಮಾಡಿ, ಅಮಾನತುಗೊಳಿಸುವುದಾಗಿ ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಪೊಲೀಸರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇನ್ನು 15 ದಿನಗಳಲ್ಲಿ ಠಾಣೆ ಸ್ವಚ್ಛವಾಗಿರಬೇಕು ಎಂದು ಬನಶಂಕರಿ ಪೊಲೀಸರಿಗೆ ಖಡಕ್ ಸೂಚನೆ ನೀಡಿದ ಅವರು, ವಾಕಿಟಾಕಿ ಮೂಲಕ ನಗರದ ಎಲ್ಲಾ ಠಾಣೆಗಳು ಸ್ವಚ್ಛವಾಗಿರಬೇಕು. ಯಾವುದೇ ಕ್ಷಣದಲ್ಲಾದರೂ ತಾವು ಠಾಣೆಗೆ ಭೇಟಿ ನೀಡಬಹುದು. ಠಾಣೆಗಳು ಸ್ವಚ್ಛವಾಗಿಲ್ಲದಿದ್ದರೇ ಅಧಿಕಾರಿಗಳನ್ನೇ ಹೊಣೆ ಮಾಡಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.