ಹುಬ್ಬಳ್ಳಿ , ಏ. 4 : ಹುಬ್ಬಳ್ಳಿಯ ಮಂಟೂರು ರಸ್ತೆಯ ಅರಳಿಕಟ್ಟಿ ಕಾಲೋನಿಯಲ್ಲಿ ಪೊಲೀಸರ ಮೇಲೆ ನಡೆದ ಕಲ್ಲು ತೂರಾಟ ಪೂರ್ವನಿಯೋಜಿತ ಕೃತ್ಯ ಎಂಬ ಅನುಮಾನ ಕಾಡುತ್ತಿದೆ. ಪೊಲೀಸರ ಕಣ್ತಪ್ಪಿಸಿ ಒಂದು ಕೋಮಿನ ಜನರು ಪ್ರಾರ್ಥನೆ ನಡೆಸಲು ಮುಂದಾಗಿದ್ದರು. ಆದ್ರೆ ಇದನ್ನು ಪ್ರಶ್ನಿಸಲಯ ಹೋದ ಪೊಲೀಸರ ಮೇಲೆ ಆ ಸಮುದಾಯದ ಮಹಿಳೆಯರು ಹಾಗೂ ಪುರುಷರು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ.