ಮಂಗಳೂರು, ಮೇ. 29, ನ್ಯೂಸ್ ಎಕ್ಸ್ ಪ್ರೆಸ್: ಮಂಗಳೂರು ನಗರ ಹೊರವಲಯದ ಪಚ್ಚನಾಡಿನಲ್ಲಿ ನಟೋರಿಯಸ್ ರೌಡಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ನಡೆದಿದೆ.
ಟಾರ್ಗೆಟ್ ಗ್ರೂಪ್ ಸದಸ್ಯ, ರೌಡಿ ಉಮರ್ ಫಾರೂಕ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಟಾರ್ಗೆಟ್ ಗ್ರೂಪ್ ಮುಖಂಡ ಇಲ್ಯಾಸ್ ಕೊಲೆ ಆರೋಪಿ ಸಮೀರ್ ಹತ್ಯೆಗೆ ಸಂಚು ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ಮಾಡಲು ಮುಂದಾಗಿದ್ದಾರೆ. ಈ ವೇಳೆ ಉಮರ್ ಫಾರೂಕ್ ಮತ್ತು ತಂಡ ಪೊಲೀಸರ ಮೇಲೆ ಪ್ರತಿ ದಾಳಿ ಮಾಡಿದ್ದಾರೆ.
ಗುಂಡಿನ ದಾಳಿಯಲ್ಲಿ ಪೊಲೀಸ್ ಪೇದೆ ಸಂದೀಪ್ ಗಾಯಗೊಂಡಿದ್ದಾರೆ. 1 ವರ್ಷದ ಹಿಂದೆ ಟಾರ್ಗೆಟ್ ಗ್ರೂಪ್ ಮುಖಂಡ ಇಲ್ಯಾಸ್ ಕೊಲೆಯಾಗಿದ್ದನ್ನು. ಇಲ್ಯಾಸ್ ಸಂಬಂಧಿ ಉಮರ್ ಫಾರೂಕ್, ಸುರ್ಮಾ ಇಮ್ರಾನ್ ಜೊತೆ ಸೇರಿ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು.
ಸದ್ಯ ಆರೋಪಿ ಫಾರೂಕ್ ಉಮರ್ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.