ಅರ್ಜಿ ವಿಚಾರಣೆ ಸಾಧ್ಯತೆ

 ಅರ್ಜಿ ವಿಚಾರಣೆ ಸಾಧ್ಯತೆ

ನವದೆಹಲಿ, ಡಿ. 18: ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಕಾನೂನು ಅಂಗೀಕಾರಗೊಂಡ ನಂತರ ದೇಶದ ವಿವಿಧೆಡೆ ಪ್ರತಿಭಟನೆ, ಹಿಂಸಾಚಾರಕ್ಕೆ ಎಡೆಮಾಡಿಕೊಟ್ಟಿದ್ದು, ಪೌರತ್ವ ಕಾಯ್ದೆ ಪ್ರಶ್ನಿಸಿ ದಾಖಲಾಗಿರುವ 60 ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ.

ಕಾಂಗ್ರೆಸ್ ಹಿರಿಯ ಮುಖಂಡ ಜೈರಾಮ್ ರಮೇಶ್, ಇಂಡಿಯನ್ ಯೂನಿಯನ್ ಮುಸ್ಲಿಮ್ ಲೀಗ್ ಹಾಗೂ ಅಸೋಮ್ ಗಣ ಪರಿಷತ್ ಸೇರಿದಂತೆ ಹಲವರು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ.

ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್ ಎ ಬೋಬ್ಡೆ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಲಿದೆ. ಈ ಪೀಠದಲ್ಲಿ ಜಸ್ಟೀಸ್ ಬಿಆರ್ ಗವಿ ಹಾಗೂ ಜಸ್ಟೀಸ್ ಸೂರ್ಯಕಾಂತ್ ಇದ್ದಾರೆ.

ಧರ್ಮದ ಆಧಾರದಲ್ಲಿ ಅಕ್ರಮ ವಲಸಿಗರಿಗೆ ಪೌರತ್ವ ನೀಡುವುದು ಸಾಂವಿಧಾನಿಕವಾಗಿ ವ್ಯಕ್ತಿಯೊಬ್ಬನ ಮೂಲಭೂತ ಬದುಕಿನ ಹಕ್ಕು ಮತ್ತು ಸಮಾನತೆಯ ಉಲ್ಲಂಘನೆಯಾಗಲಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos