ಅನರ್ಹ ಶಾಸಕರ ವಿಚಾರಣೆ ಮುಂದೂಡಿಕೆ

ಅನರ್ಹ ಶಾಸಕರ ವಿಚಾರಣೆ ಮುಂದೂಡಿಕೆ

ಬೆಂಗಳೂರು, ಅ. 22: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ 17 ಶಾಸಕರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮತ್ತೆ ಮುಂದೂಡಿದೆ. ಈ ಮೂಲಕ ವಿಚಾರಣೆ ನಾಳೆಗೆ ನಿಗದಿಯಾಗಿದೆ.

ಕಾಂಗ್ರೆಸ್ ಪರ ವಕೀಲ ಕಪೀಲ್ ಸಿಬಲ್ ಅವರು ವಿಚಾರಣೆಯನ್ನು ಒಂದು ವಾರಗಳ ಕಾಲ ಮುಂದೂಡುವಂತೆ ಕೋರ್ಟಿಗೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ, ನೆನ್ನೆ ನಡೆಯಬೇಕಿದ್ದ ವಿಚಾರಣೆಯನ್ನು ನಾಳೆಗ ಮುಂದೂಡಿದೆ. ಹೀಗಾಗಿ ಅನರ್ಹ ಶಾಸಕರು ತಮ್ಮ ಅರ್ಜಿ ವಿಚಾರಣೆಗೆ ಮತ್ತೆ ಎರಡು ದಿನ ಕಾಯುವಂತಾಗಿದೆ. ಈಗಾಗಲೇ ಉಪಚುನಾವಣೆ ಸುದ್ದಿ ಹರಿದಾಡುತ್ತಿದೆ. ಸದ್ಯ ರಾಜಕೀಯವಲಯದಲ್ಲಿ ಪಕ್ಷದಿಂದ ಪಕ್ಷಕ್ಕೆ ಹಾರುವವರ ಸಂಖ್ಯೆ ಹೆಚ್ಚಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos