ಬೆಂಗಳೂರು: ಸಲಾರ್ ಪ್ಯಾನ್ ಇಂಡಿಯಾ ಮೂಲಕ ಬ್ಲಾಕ್ಬಸ್ಟರ್ ಹಿಟ್ ಕಂಡಿದೆ. ಈ ಸಿನಿಮಾ ಬರೋಬ್ಬರಿ 400 ಕೋಟಿ ಅಧಿಕ ಕಲೆಕ್ಷನ್ ಮಾಡುತ್ತಾಯಿದೆ. ಚಿತ್ರ ತಂಡ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ
ಸಲಾರ್ ಚಿತ್ರದ ಯಶಸ್ಸಿನ ಬಳಿಕ ನಟ ಪ್ರಭಾಸ್ ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನವನ್ನು ಪಡೆದಿದ್ದಾರೆ. ದೇವರಿಗೆ ಎರಡು ಅಟ್ಟೆ ಮಲ್ಲಿಗೆ ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ದೇವಾಲಯದ ಅರ್ಚಕ ಅನಂತಪದ್ಮನಾಭ ಅಸ್ರಣ್ಣರು ಪ್ರಭಾಸ್ ಗೆ ಪ್ರಸಾದ ಶ್ರೇಷ್ಠ ವಸ್ತ್ರ ದೇವರ ಫೋಟೋ ನೀಡಿ ಹಾರೈಸಿದ್ದಾರೆ. ಪ್ರಭಾಸ್ ಮೂಲ್ಕಿ ಕಟ್ಟಿಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿದ್ದರು.