ಹುಬ್ಬಳ್ಳಿ, ಏ. 20, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರ ಪರ ಹುಬ್ಬಳ್ಳಿಯಲ್ಲಿ ಇಂದು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪ್ರಚಾರ ನಡೆಸಲಿದ್ದಾರೆ.
ನಗರದ ಗೋಕುಲ್ ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ಸಾರ್ವಜನಿಕ ಸಭೆ ಕರೆದಿರುವ ಸುಷ್ಮಾ ಸ್ವರಾಜ್ ಮತಯಾಚನೆ ಮಾಡಲಿದ್ದಾರೆ. ಈ ವೇಳೆ ರಾಷ್ಟ್ರೀಯ ಬಿಜೆಪಿ ಕಾರ್ಯದರ್ಶಿ ಮುರುಳಿಧರ್ ರಾವ್ ಕೂಡ ಸುಷ್ಮಾ ಸ್ವರಾಜ್ ಅವರಿಗೆ ಸಾಥ್ ನೀಡಲಿದ್ದಾರೆ.